ಎಂ.ಬಿ. ಅಯ್ಯನಹಳ್ಳಿ ಹೆದ್ದಾರಿಯಲ್ಲಿ ಅಪಘಾತ – ಚಿರತೆ ಸಾವು.
ಕಾನಾ ಹೊಸಹಳ್ಳಿ ಜನೇವರಿ.15

ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭಾನುವಾರ ರಾತ್ರಿ 8 ರಿಂದ 9 ಗಂಟೆ ಸಮಯದಲ್ಲಿ ರಸ್ತೆ ದಾಟುತ್ತಿದ್ದ ಚಿರತೆಯೊಂದಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಡು ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ತಾಲೂಕಿನ ಎಂ.ಬಿ ಅಯ್ಯನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50.ರಲ್ಲಿ ಈ ಘಟನೆ ಸಂಭವಿಸಿದೆ. ಗ್ರಾಮದ ನಿವಾಸಿಗಳು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದು ತಕ್ಷಣ ಅರಣ್ಯ ತಂಡವು ಪರಿಶೀಲಿಸಿದಾಗ ರಸ್ತೆಯ ಒಂದು ಬದಿಯಲ್ಲಿ ಬಿದ್ದಿರುವುದು. ಪಶು ವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಗಂಡು ಎಂದು ದೃಢಪಡಿಸಿದೆ ಮತ್ತು ಮುಖಕ್ಕೆ ಹಾಗೂ ಎದೆಗೆ ಬಲವಾದ ಪೆಟ್ಟಿನ ಪ್ರಭಾವ ದಿಂದ ಪೆಟ್ಟು ಬಿದ್ದಿದ್ದು ಅದು ಸಾವನ್ನಪ್ಪಿದೆ ಎಂದು ದೃಢಪಡಿಸಿದೆ, ಕೂಡ್ಲಿಗಿ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡ್ಲಿಗಿ ವಲಯದಲ್ಲಿ ಪ್ರಕರಣ ದಾಖಲಾಗಿದೆ.
ಹೋಬಳಿ ವರದಿಗಾರರು:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ