ಬಾಲಕರ ಮತ್ತು ಬಾಲಕಿಯರ ನಿಲಯ ವಿದ್ಯಾರ್ಥಿಗಳಿಂದ ಮತದಾರರ ಜಾಗೃತಿ ಅಭಿಯಾನ.
ಕೂಡ್ಲಿಗಿ ಏಪ್ರಿಲ್.26

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಗುರುವಾರ ರಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವಿಜಯನಗರ ತಾಲೂಕಾ ಆಡಳಿತ ಹಾಗೂ ಸ್ವೀಪ್ ಸಮಿತಿ ಕೂಡ್ಲಿಗಿ, ಜೊತೆಗೆ ತಾಲೂಕಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಜಗದೀಶ್ ದಿಡಗೂರು, ಮತ್ತು ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ರವಿಕುಮಾರ್, ನೇತೃತ್ವದಲ್ಲಿ ನಡೆದ ಮತದಾರರ ಜಾಗೃತಿ ಅಭಿಯಾನವನ್ನು ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಕೂಡ್ಲಿಗಿ ನಿಲಯಗಳಿಂದ ವಿದ್ಯಾರ್ಥಿಗಳಿಂದ ನೂರಾರು ವಿದ್ಯಾರ್ಥಿಗಳು 16 ನೇ ವಾರ್ಡ್ ರಾಜೀವ್ ಗಾಂಧಿ ನಗರದ ಹಾಗೂ ಅಂಬೇಡ್ಕರ್ ನಗರದ ಜನತೆಗೆ ಮತ ಹಾಕುವಂತೆ ಘೋಷಣೆಗಳನ್ನು ಕೂಗುತ್ತಾ ಮತದಾನಕ್ಕಿಂತ ಇನ್ನೊಂದಿಲ್ಲ ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಸಂದೇಶಗಳನ್ನು ಜನರಿಗೆ ತಿಳಿಸುತ್ತಾ ಜಾಥಾದ ಮೂಲಕ ಮತದಾನ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ರವಿಕುಮಾರ್ ಇವರು ಮಾತನಾಡಿ ಜನರಿಗೆ ಜಾಗೃತಿ ನೀಡುವುದರ ಮೂಲಕ ಎಲ್ಲಾ ಜನಗಳು ಕಡ್ಡಾಯವಾಗಿ ಮತದಾನ ಮಾಡುವಂತೆ ಹಾಗೂ ನಿಮ್ಮ ನಿಮ್ಮ ಮತದಾನದ ಹಕ್ಕು ನಿಮ್ಮ ಮತಗಟ್ಟೆಗಳಿಗೆ ಹೋಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಿದರು, ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ವರ್ಗದವರು ಪಟ್ಟಣ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಗೂ ತಾಲೂಕಾ ಪಂಚಾಯತಿಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಜಿಲ್ಲಾ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ರಾಘವೇಂದ್ರ.ಬಿ.ಸಾಲುಮನೆ. ಕೂಡ್ಲಿಗಿ.