ವಿಜಯನಗರದಲ್ಲಿ ಬಸವ ಜಯಂತಿ – ಸಂಭ್ರಮದ ಆಚರಣೆ.
ಹೊಸಪೇಟೆ ಮೇ.01

ನಗರದ ಸಿದ್ಧಿಪ್ರಿಯ ಕಲ್ಯಾಣ ಮಂಟಪ ಹತ್ತಿರ ವಿಶ್ವಗುರು ಬಸವಣ್ಣನವರ ಮೂರ್ತಿಗೆ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಮಾಲಾರ್ಪಣೆ ಮಾಡಿದರು. ಕರ್ನಾಟಕದ ಸಂಸ್ಕೃತಿಕ ನಾಯಕ ಜಗಜ್ಯೋತಿ ಬಸವೇಶ್ವರ 892 ನೇ.ಜಯಂತಿ ಸಮಾರಂಭದಲ್ಲಿ ಪೂಜ್ಯ ಶ್ರೀ ಜಗದ್ಗುರು ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳವರ ಸಾನಿಧ್ಯದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿ ಅದ್ದೂರಿಯಾಗಿ ಆಚರಿಸಲಾಯಿತು.ಈ ವೇಳೆ ಜಿಲ್ಲಾ ಪಂಚಾಯಿತಿ ಸಿ.ಇ.ಓ ಎನ್.ಮೊಹಮ್ಮದ್ ಅಕ್ರಮ ಅಲಿ ಷಾ, ತಹಶೀಲ್ದಾರ್ ಶೃತಿ ಮಳಪ್ಪ ಗೌಡ. ಪೌರಾಯುಕ್ತ ಚಂದ್ರಪ್ಪ ಅಂಜುಮನ್ ಕಮಿಟಿಯ ಅಧ್ಯಕ್ಷರು ಹಾಗು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್ ಮೊಹಮ್ಮದ್ ಇಮಾಮ್ ನಿಯಾಜಿ.ವೀರಶೈವ ಸಮಾಜದ ಮುಖಂಡರು ಸಾಲಿ ಸಿದ್ದಯ್ಯ. ಗೊಗ್ಗ ರಾಜಣ್ಣ ಸಮಾಜದ ಮುಖಂಡರು ಇತರರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮಾಲತೇಶ್.ಶೆಟ್ಟರ್.ಹೊಸಪೇಟೆ