ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರ ಸಬಲೀಕರಣ – ಜಿ.ಎಚ್.ಶ್ರೀನಿವಾಸ್
ತರೀಕೆರೆ ಆಗಷ್ಟ.30

ರಾಜ್ಯ ಸರ್ಕಾರ ಹಸಿವು ಮುಕ್ತ ಕರ್ನಾಟಕ ರಾಜ್ಯ ಮಾಡಬೇಕೆಂದು ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಘೋಷಣೆ ಮಾಡಿದೆ ಎಂದು ಶಾಸಕರಾದ ಜಿ ಎಚ್ ಶ್ರೀನಿವಾಸ್ ಹೇಳಿದರು, ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಡಳಿತ, ತಾಲೂಕು ಆಡಳಿತ,ತಾಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪುರಸಭೆ ತರೀಕೆರೆ ಏರ್ಪಡಿಸಿದ್ದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ದೇಶದಲ್ಲಿಯೇ ಪ್ರಥಮ ಬಾರಿಗೆ ಮಹಿಳೆಯರು ಉಚಿತ ಪ್ರಯಾಣ ಮಾಡಲು ಶಕ್ತಿ ಯೋಜನೆ ಜಾರಿ ಮಾಡಿದೆ. ಬಡತನದ ನಿರ್ವಹಣೆಗಾಗಿ ಉಚಿತವಾಗಿ ವಿದ್ಯುತ್ ನೀಡಲು ಗೃಹಜೋತಿ ಯೋಜನೆಯನ್ನು ಜಾರಿ ಮಾಡಿದೆ. ಅನ್ನ ಭಾಗ್ಯ ಯೋಜನೆಯಲ್ಲಿ ಪ್ರತಿ ಮಹಿಳೆಯರಿಗೂ ಅವರ ಖಾತೆಗೆ ಪಡಿತರದ ಹಣ ಜಮೆ ಮಾಡಿದ್ದೇವೆ. ಇಂದು ಗೃಹಲಕ್ಷ್ಮಿ ಯೋಜನೆಯಡಿ ಸುಮಾರು 50,000 ಜನ ನೋಂದಣಿ ಮಾಡಿಕೊಂಡಿದ್ದಾರೆ ಪ್ರತಿ ತಿಂಗಳು ಸುಮಾರು 10 ಕೋಟಿ ರೂಗಳು ಬರಿಸಬೇಕಾಗಿದೆ.
ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಬುಡುಗೋಡು ಗ್ರಾಮ ಪಂಚಾಯಿತಿಯಲ್ಲಿ ಏರ್ಪಡಿಸಲಾಗಿದೆ. ಅಲ್ಲಿಗೆ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸುವರು. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಸಬಲೀಕರಣ ಮಾಡಲಾಗುತ್ತಿದೆ ಇದರ ಉಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು. ರಾಜ್ಯ ಸರ್ಕಾರ ಮೈಸೂರಿನಲ್ಲಿ ನಡೆಯುತ್ತಿರುವ ಗೃಹಲಕ್ಷ್ಮಿ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ಪುರಸಭೆಯ ಕನಕ ಕಲಾಭವನ, ಶೃಂಗೇರಿ ಶಾರದಾ ಭವನ, ಮತ್ತು ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಉಪ ವಿಭಾಗ ಅಧಿಕಾರಿ ಡಾ. ಕಾಂತರಾಜ್, ತಹಸೀಲ್ದಾರ್ ರಾಜೀವ್ ಮಾತನಾಡಿದರು. ಸಿ ಡಿ ಪಿ ಓ ಜ್ಯೋತಿ ಲಕ್ಷ್ಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುರಸಭೆಯ ಪ್ರಭಾರಿ ಅಧ್ಯಕ್ಷರಾದ ರಿಹನಾ ಪರ್ವೀನ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕುಮಾರಪ್ಪ, ಸದಸ್ಯರಾದ ಕಮಲ ರಾಜೇಂದ್ರ, ಪರಮೇಶ್, ಟಿ ಜಿ ಲೋಕೇಶ್, ಬಸವರಾಜ್, ಮಾಜಿ ಪುರಸಭಾ ಅಧ್ಯಕ್ಷರಾದ ಎಚ್ ಯು ಫಾರೂಕ್, ಟಿಆರ್ ಬಸವರಾಜ್, ಪ್ರಕಾಶವರ್ಮ, ಧರ್ಮರಾಜ್, ಹೇಮಲತಾ, ಗೊಲ್ಲರಹಳ್ಳಿ ರಂಗಪ್ಪ, ಭಾಗ್ಯಲಕ್ಷ್ಮಿ, ಪರಶುರಾಮ್ ಉಪಸ್ಥಿತರಿದ್ದು, ಪುರಸಭಾ ಮುಖ್ಯ ಅಧಿಕಾರಿ ಹೆಚ್ಚು ಪ್ರಶಾಂತ ರವರು ಸ್ವಾಗತಿಸಿ, ಪರಿಸರ ಅಭಿಯಂತರರಾದ ತಹರ ತಸ್ಲೀಮ್ ನಿರೂಪಿಸಿ, ಗೀತಾ ಮತ್ತು ಸಂಗಡಿಗರು ಪ್ರಾರ್ಥಿಸಿದರು.
ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ