ಇಂದು ವಿಪತ್ತು ನಿರ್ವಹಣಾ ಸಮಿತಿ ಉದ್ಘಾಟನಾ ಸಮಾರಂಭ.
ಹುನಗುಂದ ಆಗಷ್ಟ.28

ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದಿ ಯೋಜನೆ ಬಿಸಿ ಟ್ರಸ್ಟ್ ಮತ್ತು ತಾಲೂಕ ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ಸಹಯೋಗದಲ್ಲಿ ಆ.೨೯ ರಂದು ಬೆಳಿಗ್ಗೆ ೧೦ ಗಂಟೆಗೆ ಗುರುಭವನದಲ್ಲಿ ಶೌರ್ಯ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಅಂಗವಾಗಿ ೮೦ನೇ ವಿಪತ್ತು ನಿರ್ವಹಣಾ ಸಮಿತಿಯ ಉದ್ಘಾಟನೆ ಸಮಾರಂಭ ಜರುಗಲಿದೆ.ಶಾಸಕ ವಿಜಯಾನಂದ ಕಾಶಪ್ಪನವರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು.ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್. ಮಂಜುನಾಥ ಆಶುಭಾಷಣ ಮಾಡುವರು.ಜಿಲ್ಲಾ ಜನಜಾಗೃತಿ ವೇದಿಕೆ ಮಾಜಿ ಉಪಾಧ್ಯಕ್ಷ ಸಕ್ರಪ್ಪ ಹೂಗಾರ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ,ತಹಶೀಲ್ದಾರ ನಿಂಗಪ್ಪ ಬಿರಾದಾರ, ವಿವೇಕ ಪ್ಯಾಸ್, ಗಣೇಶ್ ಬಿ,ಅಗ್ನಿಶಾಮಕ ಜಿಲ್ಲಾ ಅಧಿಕಾರಿ ಕೃಷ್ಣಾ.ಟಿ, ವಿಮ ಬ್ಯಾಂಕ್ ನಿರ್ದೇಶಕ ನೀಲಪ್ಪ ತಪೇಲಿ,ನಾಗೇಶ ವೈ.ಎ. ಸೇರಿದಂತೆ ಅನೇಕರು ಆಗಮಿಸಲಿದ್ದಾರೆ ಎಂದು ಯೋಜನಾಧಿಕಾರಿ ಸಂತೋಷ ತಿಳಿಸಿದ್ದಾರೆ.
ತಾಲೂಕ ವರದಿಗಾರರು: ಮಲ್ಲಿಕಾರ್ಜುನ.ಎಂ. ಬಂಡರಗಲ್ಲ