ಶ್ರೀ ವೆಂಕಟೇಶ್ವರ ಪ್ರೌಢ ಶಾಲೆಗೆ – ಅನ್ನಪೂರ್ಣ ಉತ್ನಾಳ ಪ್ರಥಮ ಸ್ಥಾನ.
ಪಡಾಗನೂರ ಮೇ.03

ದೇವರ ಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದ ಶ್ರೀ ವೆಂಕಟೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅನ್ನಪೂರ್ಣ ಸಂಗಮೇಶ ಉತ್ನಾಳ ಇವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ 625 ಕ್ಕೆ 539 ಅಂಕಗಳಿಸಿ ಶಾಲೆಗೆ ಪ್ರಥಮ ರಾಂಕ್ ಪಡೆದಿದ್ದಾಳೆ. ಸದರಿ ವಿದ್ಯಾರ್ಥಿನಿಯ ಸಾಧನೆಗೆ ಊರಿನ ಹಿರಿಯರಾದ ಶ್ರೀ ವೇ.ಅಯ್ಯಪ್ಪ ಸ್ವಾಮಿಗಳು ಹಿರೇಮಠ. ತಾಲ್ಲೂಕು ಪಂಚಾಯತಿ ಸದಸ್ಯರಾದ ಶ್ರೀಶೈಲ ಕಬ್ಬಿನ. ಮುಖ್ಯ ಗುರುಗಳಾದ ಎಂ.ಎಸ್ ದಿನ್ನಿ. ಗ್ರಾಮ ಪಂಚಾಯತಿ ಸದಸ್ಯರಾದ ಬಿರುಹಳ್ಳಿ.ರೇಣುಕಾ ಗಾಣದಾಳ ಸುಭಾಸ ಹೊಸಟ್ಟಿ.ಡಿ.ಎಚ್ ರಾಥೋಡ.

ಸೇರಿದಂತೆ ಊರಿನ ಹಿರಿಯರು ಹಾಗೂ ಗಣ್ಯರು, ಗ್ರಾಮಸ್ಥರು. ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಸಿಬ್ಬಂದಿಯವರು ಸದರಿ ವಿದ್ಯಾರ್ಥಿನಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿರುತ್ತಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಭೀಮಪ್ಪ.ಹಚ್ಯಾಳ ದೇವರ ಹಿಪ್ಪರಗಿ