ವಿಶ್ವ ಚೇತನ್ ರಾಷ್ಟ್ರೀಯ ಪ್ರಶಸ್ತಿಗೆ ಆಟೋ ಚಾಲಕರ ಸಂಘದ ಅಧ್ಯಕ್ಷ – ಸಿದ್ದು ಮುರಾರಿ ಆಯ್ಕೆ.

ಮಸ್ಕಿ ಜು.24

ದರ್ಶನ ಸೋಶಿಯಲ್ ಹಾಗೂ ಕಲ್ಚರಲ್ ಅಕಾಡೆಮಿ (ರಿ)ಬೆಂಗಳೂರು ಮತ್ತು ನೆಹರು ಯುವ ಕೇಂದ್ರ ಬೆಂಗಳೂರು ಇವರ ಸಂಯೋಗದಲ್ಲಿ ಕಲಾ ವೈಭವ 2024 ರ ಕಾರ್ಯಕ್ರಮ ದಲ್ಲಿ ವಿಶ್ವ ಚೇತನ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುತ್ತದೆ.ಪ್ರಶಸ್ತಿಗೆ ಮಸ್ಕಿ ಪಟ್ಟಣದ ಸಮಾಜ ಸೇವಕ ಹಾಗೂ ಮಸ್ಕಿ ತಾಲೂಕಾ ಆಟೋ ಚಾಲಕರ ಸಂಘಟನೆ ಅಧ್ಯಕ್ಷಸಿದ್ದು ಮುರಾರಿ ರವರಿಗೆ ವಿಶ್ವ ಚೇತನ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಸಮಾಜ ಸೇವೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.ಕೋವಿಡ್ ಸಮಯದಲ್ಲಿ ಉಚಿತವಾಗಿ ಗರ್ಭಿಣಿಯರರಿಗೆ ಹಾಗೂ ಸಾರ್ವಜನಿಕರಿಗೆ ಆಟೋ ಸೇವೆ ಸೇರಿದಂತೆ ಸಮಾಜ ಸೇವೆಯಲ್ಲಿ ಗಣನೀಯ ಸಾಧನೆಯನ್ನು ಗುರುತಿಸಿ ಜು. 28/07/2024 ರಂದು ಬೆಂಗಳೂರಿನ ಕಲಾಗ್ರಾಮ ಮಲ್ಲತ್ತಹಳ್ಳಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿಶ್ವ ಚೇತನ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ದರ್ಶನ್ ಸೋಶಿಯಲ್ & ಕಲ್ಚರಲ್ ಅಕಾಡೆಮಿ (ರಿ) ಸಂಸ್ಥೆಯ ಅಧ್ಯಕ್ಷರು ಪತ್ರಿಕೆ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಪ್ರತಾಪ್ ವಾಯ್ ಕಿಳ್ಳಿ.ಇಲಕಲ್ಲ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button