ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿ ಕೊಳ್ಳಬೇಕು – ರವಿ ದಂಡಿನ.

ರೋಣ ನ.23

ವಿದ್ಯಾರ್ಥಿ ಜೀವನವು ಜೀವನದ ಅಮೂಲ್ಯ ಘಟ್ಟವಾಗಿದ್ದು ಅತಿಯಾದ ಮನೋರಂಜನೆ ಮತ್ತು ದುಶ್ಚಟಗಳಿಗೆ ಬಲಿಯಾಗದೆ ವಿದ್ಯಾರ್ಥಿ ಜೀವನದಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಉನ್ನತವಾದ ವ್ಯಕ್ತಿತ್ವವನ್ನು ಬೆಳೆಸಿ ಕೊಳ್ಳಬೇಕು ಮತ್ತು ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುವಂತಹ ಪ್ರವೃತ್ತಿ ಬೆಳೆಸಿ ಕೊಳ್ಳಬೇಕು ಎಂದು ಕನಕದಾಸ ಶಿಕ್ಷಣ ಸಮಿತಿಯ ಕಾರ್ಯದರ್ಶಿ ರವಿ ದಂಡಿನ ಹೇಳಿದರು.ನಗರದ ಕೆ.ಎಸ್‌.ಎಸ್‌ ಕಲಾ ಹಾಗೂ ವಾಣಿಜ್ಯ ಮಹಾ ವಿದ್ಯಾಲಯದಲ್ಲಿ ನಡೆದ ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.ಇಂದಿನ ಯುವ ಜನತೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿ ಕೊಳ್ಳುವ ಪ್ರಮಾಣ ಇತ್ತೀಚಿನ ದಿನಗಳಲ್ಲಿ ಕಡಿಮೆ ಯಾಗುತ್ತಿದ್ದು.

ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ವ್ಯಕ್ತಿತ್ವ ಅಭಿವೃದ್ಧಿ ಗೊಳಿಸಿ ಕೊಳ್ಳುವುದರ ಜೊತೆಗೆ ಉನ್ನತ ವ್ಯಕ್ತಿತ್ವ ಬೆಳೆಸಿ ಕೊಂಡು ದೇಶ ಎದುರಿಸುತ್ತಿರುವ ಹಲವು ಸವಾಲುಗಳನ್ನು ಸಾಂಘಿಕವಾಗಿ ಮೆಟ್ಟಿ ನಿಂತು ದೇಶ ಕಟ್ಟುವ ಕಾರ್ಯದಲ್ಲಿ ತೊಡಗು ವಂತಾಗಬೇಕು ಎಂದರು.ಕಾರ್ಯಕ್ರಮದಲ್ಲಿ ಐ.ಸಿ.ಎಸ್ ಕಾಲೇಜು ಉಪನ್ಯಾಸಕ ಎಸ್.ಆರ್ ಚಿಕ್ಕನಗೌಡ್ರ, ಕೆ.ಎ.ಎಸ್ ಕಾಲೇಜಿನ ಪ್ರಾಚಾರ್ಯರಾದ ಸಿ.ಬಿ ಪೊಲೀಸ ಪಾಟೀಲ, ಶ್ರೀ ಶರಣ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎ.ಎಚ್ ನಾಯ್ಕರ, ಉಪನ್ಯಾಸಕರುಗಳಾದ ಎಂ.ಎಸ್ ದಳವಾಯಿ, ಎಸ್. ಆರ್ ನದಾಫ, ಎಸ್.ವಿ ಸಂಕನಗೌಡ್ರ, ಎಂ.ವೈ ಕಿತ್ತಲಿ, ಬಸವರಾಜ ಜಂಗಣ್ಣವರ, ಎಮ್. ಎಚ್ ನಾಯ್ಕರ ಕು. ಭೀಮನಗೌಡ, ಜಡಿಯಪ್ಪನವರ ಸೇರಿದಂತೆ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಸ್.ವಿ ಸಂಕನಗೌಡ್ರ ರೋಣ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button