ಶ್ರೀರಾಮನವಮಿ ಪ್ರಯುಕ್ತ ವಿಶೇಷ – ಭಜನೆ ಮತ್ತು ಪ್ರವಚನ.
ಚಳ್ಳಕೆರೆ ಏ.02

ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ “ಶ್ರೀರಾಮ ನವಮಿ” ಯ ಪ್ರಯುಕ್ತ ನಗರದ ಶ್ರೀಬ್ರಹ್ಮ ಚೈತನ್ಯ ಮಂದಿರದ ಸದ್ಭಕ್ತ ಮಂಡಳಿಯಿಂದ ಏಪ್ರಿಲ್ 6 ರ ಭಾನುವಾರ ಸಂಜೆ 5.30 ರಿಂದ ವಿಶೇಷ ಭಜನೆ ಮತ್ತು ಪ್ರವಚನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ನಗರದ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಮಾತಾಜೀ ತ್ಯಾಗಮಯೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.