ಶ್ರೀಶಾರದಾಶ್ರಮದಲ್ಲಿ ಮಕ್ಕಳಿಗಾಗಿ – ವಿದ್ಯಾರ್ಥಿ ಶಿಬಿರ.

ಚಳ್ಳಕೆರೆ ಮೇ .19

ನಗರದ ಶ್ರೀಶಾರದಾಶ್ರಮದಲ್ಲಿ ಮಕ್ಕಳಿಗಾಗಿ ವಿಶೇಷ “ವಿವೇಕ ವಿಹಾರ ವಿದ್ಯಾರ್ಥಿ ಶಿಬಿರ” ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಭಾಗವಾಗಿ ಮಕ್ಕಳಿಗೆ ಭಜನೆ, ಶ್ರೀಮದ್ ಭಗವದ್ಗೀತೆಯ ಶ್ಲೋಕಗಳನ್ನು, ಸ್ವಾಮಿ ವಿವೇಕಾನಂದರ ಚೈತನ್ಯ ದಾಯಕ ನುಡಿ ಮುತ್ತುಗಳ ಪಠಣ ಹಾಗೂ ರಸಪ್ರಶ್ನಾ ಕಾರ್ಯಕ್ರಮವನ್ನು ನಡೆಸಲಾಯಿತು.

ಶಿಬಿರದ ದಿವ್ಯ ಸಾನಿಧ್ಯವನ್ನು ಆಶ್ರಮದ ಅಧ್ಯಕ್ಷರಾದ ಮಾತಾಜೀ ತ್ಯಾಗಮಯೀ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಶ್ರೀಶಾರದಾಶ್ರಮದ ಸ್ವಯಂ ಸೇವಕರಾದ ಸಂತೋಷಕುಮಾರ್ ಅಗಸ್ತ್ಯ, ಡಾ, ಭೂಮಿಕ, ಯತೀಶ್.ಎಂ ಸಿದ್ದಾಪುರ, ಜಿ.ಯಶೋಧಾ ಪ್ರಕಾಶ್, ಬಸವರಾಜ್. ವಿದ್ಯಾರ್ಥಿಗಳಾದ ಹರ್ಷಿತಾ, ಪ್ರತೀಕ್ಷಾ, ಲಕ್ಷ್ಮೀ, ಯಶಸ್ವಿ, ಧ್ರುವ ನಾರಾಯಣ, ನಿಖಿಲೇಶ್ ಯಾದವ್, ದೈವಿಕ್, ಯಶಸ್ಸ್, ದವನ್, ವಿವಿಕ್ತಾ ಸೇರಿದಂತೆ ಇತರರಿದ್ದರು.

ವರದಿ-ಯತೀಶ್.ಎಂ ಸಿದ್ದಾಪುರ,ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button