ವಸತಿ ನಿಲಯಗಳಿಗೆ ಉಸ್ತುವಾರಿ ಕಾರ್ಯದರ್ಶಿ – ಭೇಟಿ ಪರಿಶೀಲನೆ.

ಮಾನ್ವಿ ಮೇ.22

ರಾಯಚೂರು ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರು ಮಾನ್ವಿ ತಾಲೂಕಿನ ಎಸ್ಸಿ/ಎಸ್ಟಿ ವಸತಿ ನಿಲಯ ಹಾಗೂ ತಾಯಿ ಮಕ್ಕಳ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಾನ್ವಿ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಜೋಳ ಖರೀದಿ ಕೇಂದ್ರ, ತಹಸೀಲ್ದಾರ್ ಕಚೇರಿಗಳಿಗೆ ಭೇಟಿ ನೀಡಿ ಏನಾದರು ಆಸ್ಪತ್ರೆಯಲ್ಲಿ ಸಮಸ್ಯೆ ಇದೇನಾ ಎಂದು ಸಮಸ್ಯೆ ಆಲಿಸಿದರು. ಅದೆ ರೀತಿಯಲ್ಲಿ ಎಸ್ಸಿ/ಎಸ್ಟಿ ವಸತಿ ನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಸರಕಾರ ದಿಂದ ಸೌಲಭ್ಯಗಳು ಸಿಗುತ್ತಿವೆ ಎಂದು ಸ್ಪಷ್ಟಪಡಿಸಿದರು. ಮಾನ್ವಿ ಪಟ್ಟಣದ ಜೋಳ ಖರೀದಿ ಕೇಂದ್ರದಲ್ಲಿ ತಾಂತ್ರಿಕ ತೊಂದರೆ ಯಿಂದ ಜೋಳ ಖರೀದಿ ಮಾಡುತ್ತಿಲ್ಲ ಎಂದು ರೈತರು ತಿಳಿಸಿದಾಗ ಕೂಡಲೇ ಖರೀದಿಯ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೀಶ್, ಸಹಾಯಕ ಆಯುಕ್ತ ಗಜಾನನ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚಿದಾನಂದ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಜಲ್ದಾರ್, ಪುರಸಭೆ ಮುಖ್ಯಾಧಿಕಾರಿ ಪರಶುರಾಮ ದೇವಮಾನೆ, ಮಾನ್ವಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ಪ್ರಭಾರಿ ನಿರ್ದೇಶಕ ನಟರಾಜ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಹಾಲಿಂಗಪ್ಪ ಸೇರಿದಂತೆ ಇನ್ನಿತರರಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button