ಸ್ವಾಮಿ ವಿವೇಕಾನಂದರ ಚಿಂತನೆಗಳ ಅನುಸಂಧಾನ ದಿಂದ ಬದುಕಿಗೆ ಸಕಾರಾತ್ಮಕ ಶಕ್ತಿ – ಯತೀಶ್.ಎಂ ಸಿದ್ದಾಪುರ ಅನಿಸಿಕೆ.
ಚಳ್ಳಕೆರೆ ಮೇ.24

ಸ್ವಾಮಿ ವಿವೇಕಾನಂದರ ಚೈತನ್ಯ ದಾಯಕ ಚಿಂತನೆಗಳ ಅನುಸಂಧಾನ ದಿಂದ ಬದುಕಿಗೆ ಸಕಾರಾತ್ಮಕ ಶಕ್ತಿ ದೊರೆಯುತ್ತದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂ ಸೇವಕ ಯತೀಶ್.ಎಂ ಸಿದ್ದಾಪುರ ತಿಳಿಸಿದರು. ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಬಾಪೂಜಿ ಆಯುರ್ವೇದ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ “ವ್ಯಕ್ತಿತ್ವ ನಿರ್ಮಾಣಕಾರಿ” ತರಗತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಸ್ವಾಮಿ ವಿವೇಕಾನಂದರ ವಿವಿಧ ಚಿಂತನೆಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಈ ಉಪನ್ಯಾಸದ ಆರಂಭದಲ್ಲಿ ಭಜನೆಯನ್ನು ಯತೀಶ್.ಎಂ ಸಿದ್ದಾಪುರ ನಡೆಸಿ ಕೊಟ್ಟರೆ ಗಗನ್ ಮತ್ತು ಗಮನ್ ಅವರು ಶ್ರೀಮದ್ ಭಗವದ್ಗೀತೆಯ ಶ್ಲೋಕಗಳನ್ನು ಪಠಿಸಿದರು. ಆಶ್ರಮದ ಅಧ್ಯಕ್ಷರಾದ ಮಾತಾಜೀ ತ್ಯಾಗಮಯೀ ಅವರು ವಿದ್ಯಾರ್ಥಿಗಳಿಗೆ ಧ್ಯಾನಾಭ್ಯಾಸ ಮಾಡಿಸಿದರು. ಈ ಕಾರ್ಯಕ್ರಮದಲ್ಲಿ ಶ್ರೀಶಾರದಾಶ್ರಮದ ಸ್ವಯಂ ಸೇವಕರಾದ ಋತಿಕ್,ಸಂಜನ, ಸ್ಪೂರ್ತಿ, ಸಂತೋಷಕುಮಾರ ಅಗಸ್ತ್ಯ,ಡಾ, ಭೂಮಿಕ, ಚೇತನ್, ರುಕ್ಮಿಣಿ , ಜಿ.ಯಶೋಧಾ ಪ್ರಕಾಶ್, ಮಂಜುಳ ಉಮೇಶ್, ಅಂಬಣ್ಣ, ಮೌರ್ಯ, ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವರದಿ: ಯತೀಶ್.ಎಂ ಸಿದ್ದಾಪುರ,ಚಳ್ಳಕೆರೆ.