ಗ್ರಾಮ ಪಂಚಾಯ್ತಿಯ ಅಧ್ಯಕ್ಷರಾಗಿ ಎಸ್.ಶ್ರೀಕಾಂತ್ – ಅವಿರೋಧವಾಗಿ ಆಯ್ಕೆ.
ನಿಂಬಳಗೆರೆ ಮೇ.30

ಈ ಹಿಂದೆ ಇದ್ದ ಅಧ್ಯಕ್ಷ ಎಂ.ಮಹಾಂತೇಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಗ್ರಾಮ ಪಂಚಾಯ್ತಿ ಸಭಾಂಗಣದಲ್ಲಿ ಚುನಾವಣೆ ನಡೆಯಿತು. ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಎಸ್.ಶ್ರೀಕಾಂತ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಇದರಿಂದ ಶ್ರೀಕಾಂತ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಂದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಕೊಟ್ಟೂರು ತಹಶೀಲ್ದಾರ್ ಅಮರೇಶ್ ಅವರು ಘೋಷಣೆ ಮಾಡಿದರು. ಹಾಲಿ ಉಪಾಧ್ಯಕ್ಷೆ ಕೆ. ಮಂಗಳಮ್ಮ ಸೇರಿದಂತೆ 20 ಸದಸ್ಯರು ಪಾಲ್ಗೊಂಡಿದ್ದರು. ಪಿಡಿಓ ಪ್ರಶಾಂತ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಮತ್ತು ಗ್ರಾಮ ಪಂಚಾಯ್ತಿಯ ವ್ಯಾಪ್ತಿಯ ಪ್ರಮುಖರು ಉಪಸ್ಥಿತರಿದ್ದರು.
ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಕೆ.ಎಸ್.ವೀರೇಶ್ ಕೆ.ಹೊಸಹಳ್ಳಿ