ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ – ಪಟ್ಟಣ ಪಂಚಾಯತಿ ಅಧ್ಯಕ್ಷೆ ಬದ್ದಿ.ರೇಖಾ ರಮೇಶ್.

ಕೊಟ್ಟೂರು ಮೇ.30

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಕೊಟ್ಟೂರು ಪಟ್ಟಣದಲ್ಲಿ ದಿನಾಂಕ 29 ಮೇ 2025 ರಂದು ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಬಳ್ಳಾರಿ ಸಂಸದ ತುಕಾರಾಂ ಮತ್ತು ಕೆ ನೇಮಿರಾಜ ನಾಯ್ಕ್ ಹಗರಿಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಬದ್ದಿರೇಖಾ ರಮೇಶ್ ರವರು ಇಂದಿರಾ ಕ್ಯಾಂಟೀನ್ ಟೇಪ್ ಕಟ್ ಮಾಡುವುದರ ಮೂಲಕ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಭೀಮ ನಾಯಕ್ ಮತ್ತು ಕಾಂಗ್ರೆಸ್ ಪಕ್ಷದ ಬ್ಯಾನರ್ ಕೊಟ್ಟೂರು ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಬ್ಯಾನರ್ ಹಾಕಲಾಯಿತು ಇದನ್ನು ಕಂಡ ಹಾಲಿ ಶಾಸಕರಾದ ಕೆ ನೇಮಿರಾಜ ನಾಯಕ್ ರವರು ಅಲ್ಲಿನ ಅಧಿಕಾರಿಗಳಿಗೆ ಕೆಂಡಕಾರಿ ತೆರವು ಗೊಳಿಸಲಾಯಿತು. ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಎಂ.ಎಂ.ಜೆ ಹರ್ಷವರ್ಧನ್ ಪಟ್ಟಣ ಪಂಚಾಯತಿ ಉಪಾಧ್ಯಕ್ಷರಾದ ಜಿ.ಸಿದ್ದಪ್ಪ ಮತ್ತಿತರು ಸೇರಿದ್ದರು.

ನಂತರ ಪ್ರವಾಸಿ ಮಂದಿರದಲ್ಲಿ ಸಂಸದ ತುಕಾರಾಂ ರವರು ನಮ್ಮ ಸುದ್ದಿ ವಾಹಿನಿ ಯೊಂದಿಗೆ ಇಂದಿರಾ ಕ್ಯಾಂಟೀನ್, ನ್ಯಾಷನಲ್ ಹೈವೇ, ನಮ್ಮ ಕ್ಲಿನಿಕ್ ಹಾಗೂ ಆರೋಗ್ಯಕ್ಕೆ, ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುತ್ತೇನೆ ಎಂದು ತಿಳಿಸಿದರು. ಆದರೆ ಪತ್ರಿಕೆಯವರು ಕೊಟ್ಟೂರಿನ ಸುತ್ತ ಮುತ್ತಲಿನ ಪ್ರಸ್ತುತ ತೊಂದರೆಗಳ ಬಗ್ಗೆ ಪ್ರಶ್ನೆ ಕೇಳಿದರೆ ಇಲ್ಲಿನ ಕೆಲವು ತೊಂದರೆಗಳಿವೆ, ಮುಂದಿನ ದಿನಗಳಲ್ಲಿ ಸರಿ ಪಡಿಸಿಕೊಂಡು ಹೋಗುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ದೊಡ್ಡ ರಾಮಣ್ಣ, ಎಂ ಎಂ ಜಿ ಸತ್ಯ ಪ್ರಕಾಶ್ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ದಾರುಕೇಶ್, ಡಿಎಸ್ಎಸ್ ಜಿಲ್ಲಾ ಸಂಚಾಲಕರಾದ ಬದ್ದಿ ಮರಿಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್.ಕುಮಾರ್.ಸಿ.ಕೊಟ್ಟೂರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button