ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ತರಾಟೆಗೆ ತೆಗೆದು ಕೊಂಡ – ಜಾವೀದ್ ಖಾನ್.
ಸಿರವಾರ ಮೇ.31

ಸಿರವಾರ ಹಾಗೂ ಮಸ್ಕಿ ತಾಲೂಕಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯವರು ಸರಕಾರದ ಮಾನದಂಡಗಳನ್ನು ಉಲ್ಲಂಘಿಸಿ ವಿದ್ಯಾರ್ಥಿಗಳ ಹೆಸರಿನಲ್ಲಿ ಪೋಷಕರ ಬಳಿ ಹೆಚ್ಚು ಹಣ ವಸೂಲಿ ಮಾಡಲಾಗುತ್ತದೆ ಎಂದು ಜನ ಸೇವಾ ಫೌಂಡೇಶನ್ ರಾಜ್ಯಾಧ್ಯಕ್ಷ ಜಾವೀದ್ ಖಾನ್ ಆರೋಪಿಸಿದರು. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಜಾವೀದ್ ಖಾನ್ರವರು ಸರಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಇರುವ ಕಾರಣ ಅಮಾಯಕ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಖಾಸಗಿ ಶಿಕ್ಷಣ ಸಂಸ್ಥೆಗಳ ಮೊರೆ ಹೋಗಿದ್ದಾರೆ. ಆದರೆ ಇದನ್ನೇ ಬಂಡವಾಳ ಮಾಡಿ ಕೊಂಡ ಶಿಕ್ಷಣ ಸಂಸ್ಥೆಯವರು ಹೆಚ್ಚಿನ ಹಣ ವಸೂಲಿ ಮಾಡುವ ರೂಪ ಬೆಳೆಸಿ ಕೊಂಡಿದ್ದಾರೆಂದು ಕಿಡಿಕಾರಿದರು. ಮಾನ್ವಿ ಕ್ಷೇತ್ರ ಶಿಕ್ಷಣ ಅಧಿಕಾರಿ ಚಂದ್ರಶೇಖರ ದೊಡ್ಡಮನಿ ಅವರ ದುರಾಡಳಿತ ದಿಂದ ಖಾಸಗಿ ಶಿಕ್ಷಣ ಸಂಸ್ಥೆಯ ಮಾಲೀಕರು ಮಕ್ಕಳನ್ನು ಹೊರಗೆ ನಿಲ್ಲಿಸಿ ಫೀ ಕಟ್ಟಿಲ್ಲ ಎಂದು ಹಿಂಸೆ ಕೊಡುತಿದ್ದಾರೆ. ಆದರೆ ಸಂಸ್ಥೆಗಳ ಮಾಲೀಕರು ಇದನ್ನು ನಿಲ್ಲಿಸುವ ಕೆಲಸ ಮಾಡಬೇಕು ಇಲ್ಲದಿದ್ದರೆ ಹೋರಾಟ ಮಾಡ ಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ