ಕಾಂಗ್ರೆಸ್ ಪಕ್ಷದಲ್ಲಿ ಶಿಷ್ಟಾಚಾರ ಉಲ್ಲಂಘನೆ ಗ್ಯಾರಂಟಿ ಯೋಜನೆಯ ಸದಸ್ಯೆ ಹುಸೇನ್ ಪಾಷ ಕೊಡ್ಲಿರವರ – ಗಂಭೀರ ಆರೋಪ.

ಮಾನ್ವಿ ಜೂ.08

ಮಾನ್ವಿ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆಯೇ ಇಲ್ಲ ಹಾಗೆಯೇ ಶಿಷ್ಟಾಚಾರ ಪಾಲನೆ ಯಾಗುತ್ತಿಲ್ಲ, ನಮ್ಮನ್ನು ಕಡೆಗಣಿಸುತ್ತಿದ್ದಾರೆಂದು ಗ್ಯಾರಂಟಿ ಯೋಜನೆಯ ಸದಸ್ಯ ಹುಸೇನ್ ಪಾಷ ಕೊಡ್ಲಿ ಗಂಭೀರ ಆರೋಪ ಮಾಡಿರುವುದು ಬೆಳಕಿಗೆ ಬಂದಿದೆ.

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಾನ್ವಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಫೂರ್ ಅವರು ಪಕ್ಷದ ಕಾರ್ಯಕ್ರಮ ಇದ್ದಾಗ ನನ್ನ ಭಾವಚಿತ್ರ ಹಾಕುವುದಿಲ್ಲ. ಹಾಗೆಯೇ ಗ್ಯಾರಂಟಿ ಯೋಜನೆಯ ಅಧ್ಯಕ್ಷ ಬಿ.ಕೆ.ಅಮರೇಶಪ್ಪ ಅವರು ಸಹ ನಮ್ಮನ್ನು ಪರಿಗಣಿಸುತ್ತಿಲ್ಲವೆಂದು ಕಿಡಿಕಾರಿದ್ದಾರೆ.

ಮಾನ್ವಿಯಲ್ಲಿ ಗ್ಯಾರಂಟಿ ಯೋಜನೆಯ ಅಧ್ಯಕ್ಷರು ಕಾರ್ಯಾಲಯದಲ್ಲಿ ಕಂಪ್ಯೂಟರ್ ಆಪರೇಟರನ್ನು ಇಟ್ಟು ಕೊಳ್ಳದೆ ಇರುವುದರಿಂದ ಜನರು ಗ್ಯಾರಂಟಿ ಯೋಜನೆಯ ಸಮಸ್ಯೆ ಬಗ್ಗೆ ಯಾರ ಹತ್ತಿರ ಕೇಳಬೇಕು. ಹೀಗಾಗಿ ನಾನು ಮಾನ್ವಿಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಯಾಗುತ್ತಿರುವುದ ರಿಂದ ನಾನು ಗ್ಯಾರಂಟಿ ಯೋಜನೆಯ ಸದಸ್ಯತ್ವಕ್ಕೆ ರಾಜಿನಾಮೆ ಕೊಡುತ್ತೇನೆಂದು ಮಾಧ್ಯಮಕ್ಕೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button