ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ – ಸಭೆ ಜರುಗಿತು.

ಮಾನ್ವಿ ಜೂ.10

ಮಾನ್ವಿ ಪ್ರವಾಸಿ ಮಂದಿರದಲ್ಲಿ ಇಂದು ಮಾನ್ವಿ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಹಂಪಯ್ಯ ನಾಯಕ್ ಅವರೊಂದಿಗೆ ಮಾನ್ವಿ ಹಾಗೂ ಸಿರವಾರ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು.

ಮಾನ್ವಿ ಹಾಗೂ ಸಿರವಾರ ತಾಲೂಕಿನ ನಿರ್ಮಿತಿ ಕೇಂದ್ರ, ಕ್ಯಾಶ್ಯುಟೆಕ್, ಕೆ.ಆರ್.ಡಿ.ಎಲ್, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಲ್ಯಾಂಡ್ ಆರ್ಮಿ, ಕುಡಿಯುವ ನೀರನ್ನು ಒದಗಿಸುವ ಅಮೃತ-2 ಸೇರಿದಂತೆ ವಿವಿಧ ಯೋಜನೆ ಅಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿಯ ವಾಸ್ತವ ಸ್ಥಿತಿಗತಿಯ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿಯನ್ನು ಪಡೆಯಲಾಯಿತು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ವಿವಿಧ ಯೋಜನೆ ಅಡಿ ಪಿಡಬ್ಲ್ಯೂಡಿ ಸೇರಿದಂತೆ ವಿವಿಧ ಏಜೆನ್ಸಿಗಳು ಕೈಗೆತ್ತಿ ಕೊಂಡಿರುವ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲದೆ, ತ್ವರಿತಗತಿಯಲ್ಲಿ ಪೂರ್ಣ ಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈಗಾಗಲೇ ಮಳೆಗಾಲ ಆರಂಭ ಗೊಂಡಿದ್ದು ಜೆಸ್ಕಾಂ ಅಧಿಕಾರಿಗಳು ವಿದ್ಯುತ್ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ನೆರವಾಗುವಂತೆಯೂ, ಪಟ್ಟಣದ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಪುರಸಭೆ ಅಧಿಕಾರಿಗಳು ಗಮನ ಹರಿಸುವಂತೆಯು ಸೂಚಿಸಲಾಯಿತು.

ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರಾದ ಶ್ರೀ ಬಿ.ಕೆ. ಅಮರೇಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಗಫೂರ ಸಾಬ್, ಶ್ರೀ ಕೆ.ಶಾಂತಪ್ಪ,ಪುರಸಭೆ ಅಧ್ಯಕ್ಷರಾದ ಶ್ರೀ ವೀರೇಶ್, ಪುರಸಭೆ ಸದಸ್ಯರುಗಳು ಹಾಗೂ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button