ಭಜನೆ ಮತ್ತು ಪ್ರವಚನಗಳ ಮೂಲಕ ಖ್ಯಾತರಾದವರು ಸ್ವಾಮಿ ಪುರುಷೋತ್ತಮಾನಂದರು – ಶ್ರೀಮತಿ ಜಿ.ಯಶೋಧಾ ಪ್ರಕಾಶ್ ಅಭಿಮತ.
ಚಳ್ಳಕೆರೆ ಜೂ.14

ಸ್ವಾಮಿ ಪುರುಷೋತ್ತಮಾನಂದರು ತಮ್ಮ ಭಜನೆ ಮತ್ತು ಪ್ರವಚನಗಳ ಮೂಲಕ ಖ್ಯಾತರಾದವರು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಜಿ ಯಶೋಧಾ ಪ್ರಕಾಶ್ ಅಭಿಪ್ರಾಯ ಪಟ್ಟರು. ಶಿವನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದಲ್ಲಿ ಪರಮಪೂಜ್ಯ ಸ್ವಾಮಿ ಪುರುಷೋತ್ತಮಾನಂದಜೀ ಅವರ ಜಯಂತಿಯ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಅವರ ಜೀವನ ಮತ್ತು ಸಾಧನೆಗಳ ಬಗ್ಗೆ ಉಪನ್ಯಾಸ ನೀಡಿದರು. ಬೆಂಗಳೂರಿನ ಬಸವಗುಡಿಯ ಶ್ರೀರಾಮಕೃಷ್ಣ ಆಶ್ರಮ, ಪೊನ್ನಂಪೇಟೆ ಹಾಗೂ ಬೆಳಗಾವಿಯ ಶ್ರೀರಾಮಕೃಷ್ಣ ಮಿಷನ್ ಆಶ್ರಮದ ಅಧ್ಯಕ್ಷರಾಗಿ ಸ್ವಾಮಿ ಪುರುಷೋತ್ತಮಾನಂದಜೀ ಸಲ್ಲಿಸಿದ ಸೇವೆ ಸ್ಮರಣೀಯವಾದದ್ದು.

ಅವರ ಸದ್ಗ್ರಂಥಗಳ ರಚನಾ ಕಾರ್ಯ ಬೆರಗು ಮೂಡಿಸುವಂತದ್ದು ಅವರು ಬರೆದ ನೂರಕ್ಕೂ ಹೆಚ್ಚು ಸದ್ಗ್ರಂಥಗಳು ಮೌಲ್ಯಯುತವಾಗಿದ್ದು ಆಧ್ಯಾತ್ಮಿಕ ಸಾಧಕರಿಗೆ ಸ್ಪೂರ್ತಿಯ ಚಿಲುಮೆಯಾಗಿವೆ. ಅವರು ಕರ್ನಾಟಕದ ರಾಮಕೃಷ್ಣ ಪರಂಪರೆಗೆ ನೀಡಿದ ಕೊಡುಗೆ ಅನನ್ಯವಾದದ್ದು ಎಂದರು. ಈ ಸತ್ಸಂಗ ಕಾರ್ಯಕ್ರಮದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಶ್ರೀದೇವಿಸ್ತುತಿ ಪಠಣ, ವಿಶೇಷ ಭಜನೆ ಮತ್ತು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಕಾರ್ಯಕ್ರಮ ನಡೆಯಿತು. ಸತ್ಸಂಗ ಸಭೆಯಲ್ಲಿ ಸದ್ಭಕ್ತರಾದ ಶ್ರೀಮತಿ ದ್ರಾಕ್ಷಾಯಣಿ ವಿಜಯೇಂದ್ರ, ಸೌಮ್ಯ ಪ್ರಸಾದ್, ವಿಜಯಲಕ್ಷ್ಮಿ ರಾಮರೆಡ್ಡಿ, ಶಾಂತಮ್ಮ ಶಾಂತವೀರಪ್ಪ, ನಾಗರತ್ನಮ್ಮ,ಶೈಲಜ ಶ್ರೀನಿವಾಸ್, ಕೃಷ್ಣವೇಣಿ ವೆಂಕಟೇಶ್, ಯತೀಶ್.ಎಂ ಸಿದ್ದಾಪುರ, ರಶ್ಮಿ ರಮೇಶ್ ಉಪಸ್ಥಿತರಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.