ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಜುಲೈ 9. ರಂದು – ಎಂ.ಐ.ಯು.ಕೆ.ಎಸ್ ಸಂಘಟನೆಯಿಂದ ಸಾರ್ವತ್ರಿಕ ಮುಷ್ಕರ.
ಮಾನ್ವಿ ಜೂ.15

ರಾಜ್ಯ ಸರ್ಕಾರ ಹೊಸ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎ.ಪಿ.ಎಮ್.ಸಿ ತಿದ್ದುಪಡಿ ಕಾಯ್ದೆ, ರೈತರ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವ ಕಾಯ್ದೆ ವಾಪಸ್ ಪಡೆಯುವುದು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜುಲೈ 9 ರಂದು ಎ.ಐ.ಯು.ಕೆ.ಎಸ್ ಸಂಘಟನೆಯಿಂದ ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಡಿ.ಎಚ್ ಪೂಜಾರ್ ತಿಳಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ತಾಲೂಕ ಪಂಚಾಯತಿ ಸಭಾಂಗಣದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಮೂರು ತಲೆಮಾರುಗಳಿಂದ ಸರ್ಕಾರಿ ಭೂಮಿಯನ್ನು ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ಕೊಡಬೇಕು. ರೈತರೊಂದಿಗೆ ಸಂವಾದ, ಸಮಾಲೋಚನೆ ನಡೆಸದೆ ಮತ್ತು ಸಂವಿಧಾನ ಬಾಹಿರವಾಗಿ, ಕೇಂದ್ರ ಸರ್ಕಾರ ಜಾರಿ ಗೊಳಿಸಲು ಮುಂದಾಗಿರುವ ರಾಷ್ಟ್ರೀಯ ಕೃಷಿ ಮಾರುಕಟ್ಟೆ ಮಸೂದೆಯನ್ನು ರದ್ದು ಗೊಳಿಸಬೇಕು ಎಂದು ಒತ್ತಾಯಿಸಿದರು.
ಸ್ವಾಮಿನಾಥನ್ ಆಯೋಗದ ಶಿಫಾರಸ್ಸುಗಳ ಪ್ರಕಾರ, ಪ್ರತಿ ಕೃಷಿ ಉತ್ಪಾದನೆಗೆ ಆಗುವ ವೆಚ್ಚದ ಆಧಾರದ ಮೇಲೆ MSP ಅನ್ನು 50% ಹೆಚ್ಚಿಸುವ ಮೂಲಕ ನಿರ್ಧರಿಸಬೇಕು. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ರಸ ಗೊಬ್ಬರಗಳು, ಬೀಜಗಳು ಮತ್ತು ಕೃಷಿ ಉಪಕರಣಗಳನ್ನು ಉಚಿತವಾಗಿ ಪೂರೈಸಬೇಕು ಎಂದು ಮುಷ್ಕರದಲ್ಲಿ ಒತ್ತಾಯಿಸಲಾಗುವುದು ಎಂದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ