ರಾಯಚೂರು ನಗರದ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ – ಸಚಿವ ಎನ್.ಎಸ್ ಹುಟ್ಟು ಹಬ್ಬದ ಕಾರ್ಯಕ್ರಮ ಆಯೋಜನೆ.
ಮಾನ್ವಿ ಜೂ.19

ರಾಜ್ಯದ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆ ಸಚಿವ ಎನ್.ಎಸ್ ಬೋಸರಾಜು ಅವರ 79 ನೇ. ಹುಟ್ಟು ಹಬ್ಬದ ನಿಮಿತ್ಯ ರಾಯಚೂರು ನಗರದ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಜೂನ್ 21 ರಂದು ಬೆಳಿಗ್ಗೆ 10.30 ಕ್ಕೆ ಅಭಿನಂದನೆ ಹಾಗೂ ಚೈತನ್ಯ ಸಾಗರ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಾನ್ವಿಯ ಕಾಂಗ್ರೆಸ್ ಮುಖಂಡ ರಹೆಮತ್ ಅಲಿ ಕರೆ ನೀಡಿದರು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಸಚಿವ ಎನ್.ಎಸ್ ಬೋಸರಾಜು ಅವರು ರಾಯಚೂರು ಜಿಲ್ಲೆಯಲ್ಲಿ ಕಳೆದ 50 ವರ್ಷದಿಂದ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಯಚೂರು ಜಿಲ್ಲೆಯಲ್ಲಿಯೇ ಸೌಹಾರ್ದತೆ ಯುತವಾಗಿ ರಾಜಕೀಯ ವ್ಯಕ್ತಿ, ಹೀಗಾಗಿ ಲಕ್ಷಾಂತರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಸಚಿವ ಎನ್.ಎಸ್ ಬೋಸರಾಜು ಅವರ ಕಾರ್ಯಕ್ರಮಕ್ಕೆ ತೆಲಂಗಾಣ ಉಪ ಮುಖ್ಯಮಂತ್ರಿ ಮಲ್ಲುಭಟ್ಟಿ ವಿಕ್ರಾಮರ್ಕ್ ಸೇರಿದಂತೆ ರಾಜ್ಯದ ಸ್ಪೀಕರ್ ಯು.ಟಿ ಖಾದರ್, ಗೃಹ ಮಂತ್ರಿ ಜಿ.ಪರಮೇಶ್ವರ ಹಾಗೂ ಇನ್ನಿತರ ಸಚಿವರು ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ