ಕಡಣಿಯಲ್ಲಿ ವಿವಿದ ಕಾಮಗಾರಿ ಭೂಮಿ ಪೂಜೆ – ನೇರವೇರಿಸಿದ ಶಾಸಕ ಅಶೋಕ. ಮನಗೂಳಿ.

ಕಡಣಿ ಜೂ.19

ಸಿಂದಗಿ ಮತ ಕ್ಷೇತ್ರದ ವಾಪ್ತಿಯಲ್ಲಿ ಬರುವ ಕಡಣಿ ಗ್ರಾಮದಲ್ಲಿ ೨೦೨೩/೨೪ ನೇ. ಸಾಲಿನ ಇ-ಯೋಜನೆ ಅಡಿಯಲ್ಲಿ ಬರುವ ಅಂದಾಜು ಎರಡೂ ಲಕ್ಷ ಮೊತ್ತದ ಆಲಮೇಲ ದಿಂದ ಕಡಣಿ ಹಾಗೂ ತಾವರಖೇಡ ಗ್ರಾಮಗಳ ರಸ್ತೆ ಆಗಲೀಕರಣ ಕಾಮಗಾರಿ ಭೂಮಿ ಪೂಜೆ ಹಾಗೂ ಗ್ರಾಮದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿಯ ದುರಸ್ತಿ ಕಾಮಗಾರಿ ಭೂಮಿ ಪೂಜೆ ನೆರವೇರಿಸಿದರು. ಸಿಂದಗಿಯ ಶಾಸಕರಾದ ಅಶೋಕ ಮನಗೂಳಿ ಅವರು ಮಾತನಾಡಿ ಮತ ಕ್ಷೇತ್ರದ ಅಭಿವೃದ್ಧಿಗಾಗಿ ಕರ್ನಾಟಕ ಘನ ಸರ್ಕಾರದ ಮುಖ್ಯಮಂತ್ರಿಗಳಾ ಸನ್ಮಾನ್ಯ ಸಿದ್ದರಾಮಯ್ಯ ನವರು ವಿಶೇಷವಾದ ಅನುದಾನ ನೀಡುವುದರ ಜೊತೆಗೆ ಸಿಂದಗಿ ಮತಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ. ಮುಂದಿನ ದಿನ ಮಾನಗಳಲ್ಲಿ ಇನ್ನೂ ಹೆಚ್ಚಿನ ರೀತಿಯ ಕೆಲಸಗಳನ್ನು ಮಾಡುವುದಾಗಿ ಹೇಳಿದರು.

ಮತ್ತು ಉರ್ದು ಶಾಲೆಯ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ಓದಿಸಬೇಕು. ಸರ್ಕಾರದಿಂದ ಶಿಕ್ಷಣಕ್ಕಾಗಿ ನಾನು ಹೆಚ್ಚಿನ ಸೌಕರ್ಯವನ್ನು ಒದಗಿಸುತ್ತೇನೆ ನಮ್ಮ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ಓದಿಸಲು ತಾವೆಲ್ಲರೂ ಪ್ರಯತ್ನಿಸಬೇಕು ಎಂದು ಹೇಳಿದರು, ಈ ಸಮಾರಂಭದಲ್ಲಿ ಆಲಮೇಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಸಾಧಿಕ್ ಸುಂಬಡ, ಎ.ಪಿ.ಎಂ.ಸಿ ಅಧ್ಯಕ್ಷರಾದ ಬಸವರಾಜ್ ಬಾಗೇವಾಡಿ, ಆಲಮೇಲ ನಾಗರಿಕ ವೇದಿಕೆ ಅಧ್ಯಕ್ಷರಾದ ರಮೇಶ್ ಬಂಟನೂರ್, ಬಸಲಿಂಗಪ್ಪ ಕತ್ತಿ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರು, ಸಿಂದಗಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಾದ ಅರುಣಕುಮಾರ್ ಮತ್ತು ತಾವರೆಖೇಡ ಹಾಗೂ ತಾರಾಪುರ, ಕಡಣಿ ಗ್ರಾಮದ ಹಿರಿಯರು ಯುವಕರು, ರಾಜಕೀಯ ಮುಖಂಡರು, ಉರ್ದು ಶಾಲೆಯ ಶಿಕ್ಷಕರು, ಮಕ್ಕಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಭೀಮಪ್ಪ. ಹಚ್ಯಾಳ.ದೇವರ ಹಿಪ್ಪರಗಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button