ಸಾಮಾನ್ಯರಂತೆ ಸರಳ ಜೀವನ ನಡೆಸಿದವರು ಶಾರದಾಮಾತೆ – ಶ್ರೀಮತಿ ಜಿ.ಯಶೋಧಾ ಪ್ರಕಾಶ್.
ಚಳ್ಳಕೆರೆ ಜೂ.19

ಶ್ರೀಮಾತೆ ಶಾರದಾ ದೇವಿಯವರು ನಮ್ಮಂತೆ ಸಾಮಾನ್ಯ ಜೀವನ ನಡೆಸಿದರೂ ಅದು ಜನರಿಗೆ ಮಾದರಿಯಾದದ್ದು ಎಂದು ಚಳ್ಳಕೆರೆಯ ಶಿವ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ.ಯಶೋಧಾ ಪ್ರಕಾಶ್ ತಿಳಿಸಿದರು.

ಶಿವ ನಗರದ ತಮ್ಮ ಜಿ.ವಿ.ಎಸ್ ನಿವಾಸದಲ್ಲಿ ಹಮ್ಮಿಕೊಂಡಿದ್ದ ವಾರದ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಮಾಡುತ್ತ ಮಾತನಾಡುತ್ತಿದ್ದರು. ಈ ಸತ್ಸಂಗದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಶ್ರೀದೇವಿಸ್ತುತಿ ಪಠಣ, ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಕವಿತಾ ಗುರುಮೂರ್ತಿ, ಕಾವ್ಯ ಮೌನೇಶ್ ಆಚಾರ್,ಮಾನ್ಯ ಆಚಾರ್, ಭಾಗ್ಯಲಕ್ಷ್ಮೀ,ಕಿಶನ್ ಆಚಾರ್,ಯತೀಶ್ ಎಂ ಸಿದ್ದಾಪುರ, ಶಾಂತಮ್ಮ ಶಾಂತವೀರಪ್ಪ, ಜಯಮ್ಮ, ಕೃಷ್ಣವೇಣಿ ವೆಂಕಟೇಶ್, ಸೌಮ್ಯ ಪ್ರಸಾದ್,ಶೈಲಜ ಶ್ರೀನಿವಾಸ್, ಸಂಗೀತ ವಸಂತಕುಮಾರ್, ದ್ರಾಕ್ಷಾಯಣಿ ವಿಜಯೇಂದ್ರ,ಶಾರದಾಮ್ಮಪಾಲ್ಗೊಂಡಿದ್ದರು.
ವರದಿ-ಯತೀಶ್.ಎಂ ಸಿದ್ದಾಪುರ, ಚಳ್ಳಕೆರೆ.