ಶಿಸ್ತು, ತಾಳ್ಮೆ, ಮೈಗೂಡಿಸಿ ಕೊಳ್ಳಲು ಯೋಗ ಸಹಕಾರಿ, ವೈಭವ ಆಂಗ್ಲ ಮಾಧ್ಯಮ ಶಾಲೆಯ – ಸಂಸ್ಥಾಪಕ ಅಧ್ಯಕ್ಷರಾದ ಮುರಳಿದರ ಗಜೇಂದ್ರಗಡ.
ಕೆ.ಹೊಸಹಳ್ಳಿ ಜೂ.21

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಳ್ಳಿಯ ವೈಭವ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಯೋಗ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಮುರಳಿದರ ಗಜೇಂದ್ರಗಡ ಮಾತನಾಡಿ ಪ್ರತಿದಿನ ಯೋಗ ಮಾಡುವುದನ್ನು ಅಭ್ಯಾಸ ಮಾಡಿದಲ್ಲಿ ಜ್ಞಾನವನ್ನು ವೃದ್ಧಿಸಿ ಕೊಳ್ಳುವ ಜೊತೆಗೆ ಶಿಸ್ತು ಸಂಯಮ ಹಾಗೂ ತಾಳ್ಮೆಯನ್ನು ಮೈಗೂಡಿಸಿ ಕೊಂಡು ದೇಹದ ಅಂಗಾಂಗಗಳನ್ನು ಸುಸ್ಥಿತಿಯಲ್ಲಿಟ್ಟು ಕೊಳ್ಳಬಹುದು ಎಂದು ತಿಳಿಸಿದರು.

ಪ್ರತಿಯೊಬ್ಬರು ನಿತ್ಯ ಕನಿಷ್ಠ ಒಂದು ಗಂಟೆ ಯೋಗಾಭ್ಯಾಸ ಮಾಡುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಆರೋಗ್ಯವಂತ ಜೀವನ ನಡೆಸಬಹುದು. ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುವ ಯೋಗಾಭ್ಯಾಸವನ್ನು ಕೇವಲ ಒಂದು ದಿನಕ್ಕೆ ಸೀಮಿತ ಗೊಳಿಸದೆ ಪ್ರತಿನಿತ್ಯ ಕನಿಷ್ಠ ಒಂದು ಗಂಟೆ ಅಭ್ಯಾಸ ಮಾಡುವುದನ್ನು ರೂಢಿ ಮಾಡಿ ಕೊಳ್ಳಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸವಿತಾ ಗಜೇಂದ್ರಗಡ, ಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆ.ಜಿ ಸಿದ್ದನಗೌಡ, ಸಿ.ಆರ್.ಪಿ ಸಿದ್ದೇಶ್ವರ, ಪಿಯು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಾತಪ್ಪ, ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರಕಾಶ್ ಗೌಡ, ವೈಭವ, ಪೂಜಾರ್ ಕಲ್ಲೇಶ್, ಕಂಪಳೇಶ್, ಯೋಗ ಶಿಕ್ಷಕರು ಸೇರಿದಂತೆ ದೃತಿ ವಿದ್ಯಾ ಸಂಸ್ಥೆ, ವೈಭವ ಆಂಗ್ಲ ಮಾಧ್ಯಮ ಶಾಲೆ, ಕಾಳಿದಾಸ ಕಿರಿಯ ಪ್ರಾಥಮಿಕ ಶಾಲೆ, ಇಂದು ಪದವಿ ಪೂರ್ವ ಕಾಲೇಜು ಹೊಸಹಳ್ಳಿ ಮುಖ್ಯಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ ಹಾಗೂ ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಇತರರು ಸಾರ್ವಜನಿಕರು ಉಪಸ್ಥಿತರಿದ್ದರು.
ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್ ವೀರೇಶ್.ಕೆ.ಹೊಸಹಳ್ಳಿ