ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ರೂಢಿಸಿ ಕೊಂಡು ದೇಶಕ್ಕೆ ಕೊಡುಗೆ ನೀಡುವಂತಾಗಬೇಕು – ನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ಪೂಜ್ಯ ವೈ.ರಾಜಾರಾಮ್ ಗುರುಗಳು ಅಭಿಪ್ರಾಯ.

ಚಳ್ಳಕೆರೆ ಜೂ.23

ವಿದ್ಯಾಥಿಗಳು ತಮ್ಮ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ರೂಢಿಸಿ ಕೊಂಡು ದೇಶಕ್ಕೆ ಕೊಡುಗೆ ನೀಡುವ ವ್ಯಕ್ತಿಗಳಾಗಬೇಕು ಎಂದು ಚಳ್ಳಕೆರೆ ಹೊರವಲಯದ ನರಹರಿ ನಗರದ ನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ಪೂಜ್ಯ ವೈ.ರಾಜಾರಾಮ್ ಗುರುಗಳು ತಿಳಿಸಿದರು. ಶ್ರೀನರಹರಿ ಸೇವಾ ಪ್ರತಿಷ್ಠಾನ ಹಾಗೂ ನಾಗ ಸಿಂಹಾದ್ರಿ ಚಾರಿಟೀಸ್ ನ ವತಿಯಿಂದ ನರಹರಿ ನಗರದ ಶ್ರೀನರಹರೇಶ್ವರ ದೇವಸ್ಥಾನದ‌ ಆವರಣದಲ್ಲಿ ಆಯೋಜಿಸಿದ್ದ 2024-25 ನೇ. ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇಕಡ 95 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ” ಹಾಗೂ “ಕಾಲುವೆಹಳ್ಳಿಯ ಶತಾಯುಷಿ ಸೂಲಗಿತ್ತಿ ತಳುಕಿನ ತಿಮ್ಮಕ್ಕ” ರ ಸೇವೆಯನ್ನು ಗುರುತಿಸಿ ಸನ್ಮಾನಿಸಿ ಅವರು ಆಶೀರ್ವಚನ ನೀಡಿದರು. ಶ್ರೀನರಹರಿ ಸೇವಾ ಪ್ರತಿಷ್ಠಾನದ ಜಂಟಿ ಕಾರ್ಯದರ್ಶಿ ಬಿ.ಸಿ ಸಂಜೀವಮೂರ್ತಿ ಮಾತನಾಡಿ ವಿದ್ಯಾರ್ಥಿಗಳು ಅಂಕಗಳಿಕೆಯ ಜೊತೆಗೆ ಸೇವಾ ಮನೋಭಾವವನ್ನು ರೂಢಿಸಿ ಕೊಳ್ಳಬೇಕು. ಸೇವೆಯಿಂದ ಜೀವನಕ್ಕೆ ಸಾರ್ಥಕತೆ ಸಿಗುತ್ತದೆ. ಆದ್ದರಿಂದ ಉತ್ತಮ ಚಿಂತನೆಗಳ ಆಲೋಚನೆ ಹಾಗೂ ಅನುಷ್ಠಾನದಿಂದ ಸಮರ್ಥ ರಾಷ್ಟ್ರವನ್ನು ನಿರ್ಮಿಸಬಹುದು ಎಂದು ಕಿವಿಮಾತು ಹೇಳಿದರು.

ವಾಣಿಜ್ಯೋದ್ಯಮಿಗಳಾದ ಸುಧಾಕರ್.ಜಿ ಜೆ ಸತ್ಯನಾರಾಯಣ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕಾಲುವೆಹಳ್ಳಿಯ ಶ್ರೀಆಂಜನೇಯ ಸ್ವಾಮಿ ಭಜನಾ ಮಂಡಳಿಯ ಸದಸ್ಯರು ವಿಶೇಷ ಭಜನಾ ಕಾರ್ಯಕ್ರಮವನ್ನು ನಡೆಸಿ ಕೊಟ್ಟರು. ಕಾರ್ಯಕ್ರಮದಲ್ಲಿ ಬಿ.ಸಿ ವೆಂಕಟೇಶಮೂರ್ತಿ, ದೇವರಾಜರೆಡ್ಡಿ, ರಾಜೇಶ್ವರಿ ರಾಜಾರಾಮ್, ಏಳುಕೋಟಿ ರಾವ್, ರಾಮಚಂದ್ರಪ್ಪ, ಮಲ್ಲಿಕಾರ್ಜುನಪ್ಪ, ಮಾರುತಿ, ಯತೀಶ್.ಎಂ ಸಿದ್ದಾಪುರ, ಮೋಹಿನಿ, ರಾಘವೇಂದ್ರ, ರವಿಕುಮಾರ್, ಸರಸ್ವತಿ ಗೋವಿಂದರಾಜು, ಗೀತಾ ಭಕ್ತವತ್ಸಲ, ಪ್ರೇಮಲೀಲಾ, ಬಸವರಾಜ್, ರೇವಣಸಿದ್ದಪ್ಪ , ಪಾಲಕ್ಕ, ತಿಮ್ಮಯ್ಯ, ಬೋರಣ್ಣ, ಮಂಜುಳ, ವೈಭವ, ಸುಹಾಸ್, ಐಶ್ವರ್ಯ, ಮೌನ, ಸೇರಿದಂತೆ ಸದ್ಭಕ್ತರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button