ನಗರದ ಕೆ.ಎಸ್.ಎಸ್ ಮಹಾ ವಿದ್ಯಾಲಯದಲ್ಲಿ ಬಿ.ಎ ಹಾಗೂ ಬಿ.ಕಾಂ ಅಂತಿಮ ವರ್ಷದ – ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ.
ರೋಣ ಜೂ.25

ನಗರದ ಪ್ರಸಿದ್ಧ ಮಹಾವಿದ್ಯಾಲಯವಾದ ಕೆ.ಎಸ್.ಎಸ್ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬಿ.ಎ ಹಾಗೂ ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಅದ್ದೂರಿಯಾಗಿ ಜರುಗಿತು. ಈ ಕಾರ್ಯಕ್ರಮವು ಸಂಪ್ರದಾಯ ಬದ್ದವಾಗಿ ಸರಸ್ವತಿ ಪೂಜಾ ಕಾರ್ಯಕ್ರಮದೊಂದಿಗೆ ಪ್ರಾರಂಭವಾಯಿತು. ಕಾರ್ಯಕ್ರಮವು ಬಸಮ್ಮ ವಿದ್ಯಾರ್ಥಿನಿಯ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ನಂತರ ಮಹಾವಿದ್ಯಾಲಯದ ಪ್ರಾಚಾರ್ಯರಾದ ಸಿ.ಬಿ ಪೋಲಿಸ್ ಪಾಟೀಲ್ ವೇದಿಕೆ ಮೇಲೆ ಗಣ್ಯ ಮಾನ್ಯರನ್ನು ಸ್ವಾಗತಿಸಿದರು. ಅದೇ ರೀತಿಯಾಗಿ ಮಹಾವಿದ್ಯಾಲಯದ ಭೂಗೋಳ ಶಾಸ್ತ್ರ ಉಪನ್ಯಾಸಕರಾದ ಎಲ್ ಕೆ ಚಂದೂಕರ ಮಾಲಾರ್ಪಣೆ ಕಾರ್ಯಕ್ರಮ ನಡೆಸಿದರು. ನಂತರ ಮಹಾವಿದ್ಯಾಲಯದ ವರ್ಷದ ಎಲ್ಲಾ ಚಟುವಟಿಕೆಗಳ ವರದಿಯನ್ನು ಡಾಕ್ಟರ್, ಎಸ್.ಆರ್ ನದಾಫ್ ವರದಿ ವಾಚನ ಮಾಡಿದರು.ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರಾದ ಯುಬಿ ಬಸನಗೌಡ್ರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು ಇದಾದ ನಂತರ ಹಲವಾರು ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯಗಳನ್ನು ಅನಿಸಿಕೆ ಮುಖಾಂತರ ಹಂಚಿ ಕೊಂಡರು ಇದಾದ ನಂತರ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ವೇದಿಕೆ ಮೇಲೆ ಇರುವ ಎಲ್ಲಾ ಮಹನೀಯರು ಬಹುಮಾನ ವಿತರಿಸಿದರು. ಈ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಶ್ರೀಮತಿ ಜ್ಯೋತಿ ಮೇಡಂ ರವರು ನಡೆಸಿ ಕೊಟ್ಟರು ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯ ಭಾಷಣವನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಸಿಬಿ ಪೊಲೀಸ್ ಪಾಟೀಲ್ ಅವರು ನೆರವೇರಿಸಿದರು. ಇದಾದ ನಂತರ ಎಸ್ಸಿ ನದಾಫ್ ಉಪನ್ಯಾಸಕರು ವಂದನಾರ್ಪಣೆ ಕಾರ್ಯಕ್ರಮ ನಡೆಸಿ ಕಾರ್ಯಕ್ರಮ ಮುಕ್ತಾಯ ಗೊಳಿಸಿದರು. ಈ ಸಮಯದಲ್ಲಿ ಮಹಾವಿದ್ಯಾಲಯದ ಎಲ್ಲಾ ಉಪನ್ಯಾಸ ವೃಂದದವರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಸ್.ವಿ ಸಂಕನಗೌಡ್ರ.ರೋಣ.ಗದಗ