ಪೊಲೀಸ್ ರ್‍ಯಾಲಿ ಮೂಲಕ ಮಾದಕ – ದ್ರವ್ಯ ವಿರೋಧಿ ದಿನಾಚರಣೆ.

ಕೊಟ್ಟೂರು ಜೂ .26

ಡ್ರಗ್ ದುರುಪಯೋಗ ಮತ್ತು ಅಕ್ರಮ ಕಳ್ಳ ಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ವಿಶ್ವ ಡ್ರಗ್ ಡೇ ಎಂದೂ ಕರೆಯಲಾಗುತ್ತದೆ. ಇದನ್ನು ಪ್ರತಿ ವರ್ಷ ಜೂನ್ 26 ರಂದು ಮಾದಕ ವ್ಯಸನ ಮುಕ್ತ ಜಗತ್ತನ್ನು ನಿರ್ಮಿಸಲು ಕ್ರಮ ಮತ್ತು ಸಹಕಾರವನ್ನು ಬಲಪಡಿಸಲು ಆಚರಿಲಾಗುತ್ತದೆ. ಪ್ರತಿ ವರ್ಷ ಪ್ರಪಂಚದಾದ್ಯಂತದ ವಿವಿಧ ಸಂಸ್ಥೆಗಳು ವಿಶ್ವ ಮಾದಕವಸ್ತು ದಿನವನ್ನು ಆಚರಿಸುತ್ತವೆ. ಜೊತೆಗೆ ಸಮಾಜಕ್ಕೆ ನಿಷೇಧಿತ ಮಾದಕ ವಸ್ತುಗಳು ಉಂಟು ಮಾಡುವ ಪ್ರಮುಖ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸಲು ಕೊಟ್ಟೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ದೊಡ್ಮನೆ ಮಲ್ಲೇಶ್, ಡಿವೈಎಸ್ಪಿ ನೇತೃತ್ವದಲ್ಲಿ ಕೊಟ್ಟೂರು ಪೊಲೀಸ್ ಮತ್ತು ಪಟ್ಟಣದ ಕಾಲೇಜು ಸೇರಿದಂತೆ 26 ಜೂನ್ 2025 ರಂದು ರ‍್ಯಾಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಕನ್ನಡದ ಖ್ಯಾತ ಸಾಹಿತಿ ಕುಂಬಾರ್ ವೀರಭದ್ರಪ್ಪ ರವರು ಮಾದಕ ದ್ರವ್ಯ ಮತ್ತು ದುಶ್ಚಟಗಳಿಂದ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕರು ದೂರ ವಿರಬೇಕು, ಮಾದಕ ದ್ರವ್ಯ ವಸ್ತುಗಳ ಸಾಗಟಕ್ಕೆ ಕಡಿವಾಣ ಹಾಕಬೇಕು ಆದ್ದರಿಂದ ಕರ್ನಾಟಕದಲ್ಲಿ ಪೊಲೀಸ್ ಸಿಬ್ಬಂದಿ ಸಂಖ್ಯೆ ಕಡಿಮೆ ಇದೆ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಹೆಚ್ಚಿಸಿ ಕೊಳ್ಳಬೇಕು ಎಂದು ಮಾತನಾಡಿದರು. ನಂತರ ಡಿವೈಎಸ್ಪಿ ದೊಡ್ಮನಿ ಮಲ್ಲೇಶ್ ಅವರು ಯಾರಾದರೂ ಮಾದಕ ದ್ರವ್ಯಗಳನ್ನು ಸೇವನೆ ಮಾಡುವುದು ಕಂಡು ಬಂದರೆ ಹಾಗೂ ಯುವಕರು ಸೇವನೆ ಮಾಡುತ್ತಿದ್ದರೆ ಅದನ್ನು ಸೂಕ್ಷ್ಮವಾಗಿ ಪೊಲೀಸ್ ಮತ್ತು ಪತ್ರಿಕಾ ಮಾಧ್ಯಮದವರಿಗೆ ಹಾಗೂ ತಮ್ಮ ತಂದೆ ತಾಯಿಯವರಿಗೆ ತಿಳಿಸಬೇಕು ಒಟ್ಟಿನಲ್ಲಿ ಸಹಕಾರ ನೀಡಿದರೆ ಪೊಲೀಸ್ ಸಿಬ್ಬಂದಿ ವರ್ಗವೂ ಮಾದಕ ದ್ರವ್ಯ ವಸ್ತುಗಳನ್ನು ಕಡಿವಾಣ ಹಾಕಲು ಸಹಕಾರವಾಗುತ್ತದೆ ಎಂದು ಮಾತನಾಡಿದರು. ಈ ಸಂದರ್ಭದಲ್ಲಿ ವೆಂಕಟಸ್ವಾಮಿ ಸಿಪಿಐ ಗೀತಾಂಜಲಿ ಸಿಂಧೆ ಪಿಎಸ್ಐ ಮತ್ತು ಪೊಲೀಸ್ ಸಿಬ್ಬಂದಿ ವರ್ಗದವರು ಹಾಗೂ ಪಟ್ಟಣದ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್.ಕುಮಾರ್.ಸಿ.ಕೊಟ್ಟೂರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button