“ಪ್ಲಾಸ್ಟಿಕ್ ಚೀಲ ಬಿಡಿ-ಬಟ್ಟೆ ಚೀಲ ಹಿಡಿ”ಬಟ್ಟೆ ಚೀಲ ಬಳಸುವ ರೂಢಿ ದೈನಂದಿನ ಜೀವನದ ಭಾಗವಾಗಲಿ – ಸಂತೋಷ ಬಂಡೆ.

ಹಿರೇರೂಗಿ ಜು.04

ಪ್ಲಾಸ್ಟಿಕ್‌ ತ್ಯಾಜ್ಯವು ಜಾಗತಿಕ ಸಮಸ್ಯೆಯಾಗಿದೆ. ಜಗತ್ತಿನ ಅತಿ ಎತ್ತರದ ಗಿರಿ ಶಿಖರಗಳಿಂದ ಹಿಡಿದು ಆಳ ಸಮುದ್ರದ ಒಡಲೊಳಗೆ ಸೇರಿ ಕೊಳ್ಳುತ್ತಿರುವ ಇದು ಜನ, ಜಾನುವಾರು ಹಾಗೂ ಸಸ್ಯ ಸಂಕುಲಕ್ಕೆ ಮಾರಕವಾಗಿದ್ದು, ಇದರ ನಿಯಂತ್ರಣ ಇಂದಿನ ಅಗತ್ಯವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಗುರುವಾರ ದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ‘ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನ’ ದ ನಿಮಿತ್ತ ಹಮ್ಮಿಕೊಂಡ ‘ಪ್ಲಾಸ್ಟಿಕ್ ಚೀಲ ಬಿಡಿ-ಬಟ್ಟೆ ಚೀಲ ಹಿಡಿ’ ಚರ್ಚಾ ಗೋಷ್ಠಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು.

ಪ್ಲಾಸ್ಟಿಕ್‌ ವಸ್ತುಗಳು ಮಣ್ಣಿನಲ್ಲಿ ಕೊಳೆಯುವುದಿಲ್ಲ. ಅವನ್ನು ಸುಟ್ಟರೆ ‘ಡಯಾಕ್ಸಿನ್‌’ ಎಂಬ ವಿಷ ಪೂರಿತ ಅಂಶ ಬಿಡುಗಡೆಯಾಗಿ, ಅದು ಗಾಳಿಯಲ್ಲಿ ಬೆರೆತು ಉಸಿರಾಟಕ್ಕೆ ತೊಂದರೆ ಯಾಗುತ್ತದೆ. ಪ್ಲಾಸ್ಟಿಕ್ ಚೀಲಗಳ ಬಳಕೆ ಕಡಿಮೆ ಮಾಡಿ, ಬಟ್ಟೆ ಚೀಲ ಬಳಸುವ ರೂಢಿ ದೈನಂದಿನ ಜೀವನದ ಭಾಗವಾಗ ಬೇಕಿದೆ ಎಂದು ಹೇಳಿದರು.

ಮುಖ್ಯ ಶಿಕ್ಷಕ ಎಸ್.ಎಸ್ ಅರಬ ಮಾತನಾಡಿ, ನಮ್ಮ ದೈನಂದಿನ ಜೀವನದಲ್ಲಿ ತರಕಾರಿ, ದಿನಸಿ ವಸ್ತುಗಳನ್ನು ತರಲು ಪ್ಲಾಸ್ಟಿಕ್ ಚೀಲದ ಬದಲಾಗಿ ಬಟ್ಟೆ ಚೀಲಗಳನ್ನು ಬಳಸುವ ರೂಢಿ ಎಲ್ಲರಲ್ಲಿ ಮೂಡಿದಾಗ ಪ್ಲಾಸ್ಟಿಕ್ ಮಾಲಿನ್ಯ ದಿಂದ ಮುಕ್ತವಾಗಿ, ಸದೃಢ ಆರೋಗ್ಯ ಹೊಂದಲು ಸಾಧ್ಯವಾಗುತ್ತದೆ ಎಂದು ಹೇಳಿದರು.ಶಿಕ್ಷಕರಾದ ಎನ್.ಬಿ ಚೌಧರಿ, ಎಸ್.ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು ಎಂದು ವರದಿಯಾಗಿದೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button