ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ಪುರಸಭೆಯ ಅಧ್ಯಕ್ಷರ ವಿರುದ್ಧ – ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಲು ಆಗ್ರಹ.
ಮುದ್ದೇಬಿಹಾಳ ಜು.22

ಪಟ್ಟಣದ ಪುರಸಭೆ ಅಧ್ಯಕ್ಷ ಮಹಿಬೂಬ್ ಗೊಳಸಂಗಿ ಅವರು ದಲಿತ ಸಮುದಾಯದ ಹೋರಾಟಗಾರರನ್ನು ಅವಮಾನಿಸಿದ್ದು ಅಲ್ಲದೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬುದನ್ನು ಸುಳ್ಳು ಆರೋಪ ಮಾಡಿರುವುದನ್ನು ಖಂಡಿಸಿ ಇಲ್ಲಿನ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ತಮಟೆ ಚಳುವಳಿ ಪ್ರತಿಭಟನೆಯನ್ನು ನಡೆಸಲಾಯಿತು. ಪಟ್ಟಣದ ಪುರಸಭೆಗೆ ಆಗಮಿಸಿದ್ದ ಪ್ರತಿಭಟನಾಕಾರರು ಪುರಸಭೆ ಅಧ್ಯಕ್ಷರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು. ದ.ಸಂ.ಸ ಜಿಲ್ಲಾ ಸಂಚಾಲಕ ಹರೀಶ್ ನಾಟೇಕರ್ ಮಾತನಾಡಿ. ಪುರಸಭೆ ಅಧ್ಯಕ್ಷರು ಪದೇ ಪದೇ ಜಾತಿ ನಿಂದಣೆ ಹಾಗೂ ಅವಹೇಳನ ಕಾರಿಯಾಗಿ ಮಾತನಾಡಿದ್ದು. ಇವರ ಮೇಲೆ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ತಾಲೂಕು ಪಂಚಾಯಿತಿ ವಸತಿ ಗೃಹ ನೆಲ ಸಮ ಮಾಡಿದ್ದು ಮತ್ತು ಸರ್ಕಾರದ ಆಸ್ತಿಯನ್ನು ಹಾನಿ ಮಾಡಿದ್ದಕ್ಕಾಗಿ ಇವರ ಮೇಲೆ ಕೂಡಲೇ ಸರ್ಕಾರದಿಂದ ಕ್ರಿಮಿನಲ್ ಕೇಸ್ ದಾಖಲಿಸ ಬೇಕು ಎಂದು ಒತ್ತಾಯಿಸಿದರು. ಅಧ್ಯಕ್ಷರ ಮೇಲೆ ದೌರ್ಜನ್ಯ ಗುಂಡಾ ಕಾಯ್ದೆ ಕೋಮು ಗಲಭೆ ಕೇಸ್ ದಾಖಲಿಸಿ ಇವರನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಮತ್ತು ದಲಿತ ಸಂಘಟನೆ ನಾಯಕರಿಗೆ ತೇಜೋವಧೆ ಮಾಡಿರುವ ಇವರ ಮೇಲೆ ಮಾನನಷ್ಟ ಮೊಕದ್ದಮೆ ಜಾತಿ ನಿಂದಣೆ ಕೇಸ್ ದಾಖಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು. ಅಂಬೇಡ್ಕರ್ ಸೇನೆ ತಾಲೂಕ ಅಧ್ಯಕ್ಷ ಪ್ರಕಾಶ್ ಚಲವಾದಿ. ಆನಂದ್ ಮುದುರ್. ಬಸವರಾಜ್ ಸರೂರ್. ಪರಶುರಾಮ್ ನಲತ್ವಾಡ. ಸಂಜು ಬಾಗೇವಾಡಿ. ಪ್ರಶಾಂತ್ ಕಾಳೆ. ಶಿವು ಕನ್ನೊಳ್ಳಿ. ಬಾಲಚಂದ್ರ ಹುಲ್ಲೂರ್. ಹನುಮಂತ ಗುಂಡಕರ್ಜಗಿ. ಸೇರಿದಂತೆ ಇನ್ನೂ ಹಲವು ದಲಿತ ಮುಖಂಡರು ಪಾಲ್ಗೊಂಡಿದ್ದರು. ಇದೇ ವೇಳೆಯಲ್ಲಿ ಮುಖ್ಯ ಅಧಿಕಾರಿ ಮಲ್ಲನಗೌಡ ಬಿರಾದಾರಗೆ ಮನವಿ ಸಲ್ಲಿಸಿದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಬಸವರಾಜ.ಸಂಕನಾಳ.ಮುದ್ದೇಬಿಹಾಳ