ಶ್ರೀರಾಮಕೃಷ್ಣರು ಸಂನ್ಯಾಸಿಗಳು ಮತ್ತು ಭಕ್ತರ ಯೋಗ ಕ್ಷೇಮವನ್ನು ನೋಡಿ ಕೊಳ್ಳುತ್ತಾರೆ – ಶ್ರೀಮತಿ ಜಿ.ಯಶೋಧಾ ಪ್ರಕಾಶ್ ಅಭಿಮತ.
ಚಳ್ಳಕೆರೆ ಜ.04

ಶ್ರೀಮಾತೆ ಶಾರದಾದೇವಿಯವರು ತಿಳಿಸಿದಂತೆ ಶ್ರೀರಾಮಕೃಷ್ಣರು ಸಂನ್ಯಾಸಿಗಳು ಮತ್ತು ಭಕ್ತರ ಯೋಗ ಕ್ಷೇಮವನ್ನು ನೋಡಿ ಕೊಳ್ಳುತ್ತಾರೆ ಎಂದು ಚಳ್ಳಕೆರೆಯ ಶಿವ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ.ಯಶೋಧಾ ಪ್ರಕಾಶ್ ತಿಳಿಸಿದರು.

ಶಿವ ನಗರದ ತಮ್ಮ ಜಿ.ವಿ.ಎಸ್ ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಮಾಡುತ್ತ ಮಾತನಾಡುತ್ತಿದ್ದರು.

ಧನುರ್ಮಾಸದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಶ್ರೀವಿಷ್ಣು ಸಹಸ್ರನಾಮ ಪಠಣ, ವಿಶೇಷ ಭಜನೆ ಮತ್ತು ಶ್ರೀಮದ್ ಭಗವದ್ಗೀತೆಯ ಧ್ಯಾನ ಶ್ಲೋಕಗಳ ಕಲಿಕಾ ಕಾರ್ಯಕ್ರಮ ನಡೆಯಿತು.

ಸತ್ಸಂಗ ಕಾರ್ಯಕ್ರಮದಲ್ಲಿ ಶ್ರೀಮತಿ ಶಿಲ್ಪಾ ಮಹೇಶ್,ಅನಿತಾ, ಶಾಂತಮ್ಮ, ವಿಜಯಲಕ್ಷ್ಮೀ, ರಶ್ಮಿ ರಮೇಶ್, ರಶ್ಮಿ ವಸಂತ, ಸಂಗೀತ, ಯತೀಶ್ ಎಂ ಸಿದ್ದಾಪುರ,ಶೈಲಜಾ, ಕೃಷ್ಣವೇಣಿ,ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ, ಸುಧಾಮಣಿ, ಭಾಗ್ಯಲಕ್ಷ್ಮೀ, ಜಯಮ್ಮ, ಜಯಶೀಲಮ್ಮ, ಸರಸ್ವತಿ, ಶಾರದಮ್ಮ, ದ್ರಾಕ್ಷಾಯಣಿ ಭಾಗವಹಿಸಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

