ಭೀಮಾ ನದಿ ನೀರು ಇಳಿಕೆ ತಾರಾಪುರ – ಗ್ರಾಮಸ್ಥರ ನಿಟ್ಟುಸಿರು.

ತಾರಾಪುರ ಸ.27

ದೇವಣಗಾಂವ ಸಮೀಪದ ಭೀಮಾ ತೀರದ ಹರಿಯುತ್ತೀರುವ ನೀರು

ಆಲಮೇಲ ತಾಲೂಕಿನಲ್ಲಿ ಹರಿಯುವ ಭೀಮಾ ನದಿಯ ಪ್ರವಾಹಕ್ಕೆ ಒಳಗಾಗಿರುವ ಜನರ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದೆ ಮೇಲೆ ಮಳೆ…. ಕೆಳಗೆ ಹೊಳೆ…. ಯಾವಾಗ ಏನಾಗುತ್ತದೆ ಎಂಬ ಭಯದಲ್ಲಿ ಬದುಕುತ್ತಿದ್ದಾರೆ ನದಿ ಪಾತ್ರದ ಜನರು ಕಳೆದ ಒಂದು ವಾರದಿಂದ ಏರುತ್ತಾ ಸಾಗಿರುವ ಭೀಮಾ ನದಿಯ ನೀರಿನ ಹರಿವಿನ ಪ್ರಮಾಣ ಗುರುವಾರ ರಾತ್ರಿ ಇಡೀ ಏರಿಕೆ ಕಂಡು ಶುಕ್ರವಾರ ಬೆಳಗ್ಗಿನಿಂದ ಸಾಯಂಕಾಲದ ವರೆಗೆ ಅದೇ ಸ್ಥಿತಿಯಲ್ಲಿ ಮುಂದುವರೆದಿದೆ.

ಗುರುವಾರ ರಾತ್ರಿ ಇಡೀ ಹಾಗೂ ಶುಕ್ರವಾರ ದಿನವಿಡೀ ಸುರಿದ ಮಳೆಗೆ ಜನ ಕಂಗಾಲಾಗಿದ್ದಾರೆ ಎರಡು-ಮೂರು ದಿನಗಳಿಂದ ವಿಶ್ರಾಂತಿ ಕೊಟ್ಟಿದ್ದ ಮಳೆರಾಯ ಶುಕ್ರವಾರ ಇಡೀ ದಿನ ಮಳೆ ಸುರಿದ ಪರಿಣಾಮ ಜನತೆಯಲ್ಲಿ ಭಯ ಹುಟ್ಟಿಸುವಂತಾಗಿದೆ, ಮಳೆಯೊಂದಿಗೆ ತಂಪಾದ ಗಾಳಿ ಬೀಸುತ್ತಿದ್ದು ಇದು ಕೂಡ ಜನರ ಜೀವನದ ಮೇಲೆ ಹಾಗೂ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಾ ಸಾಗಿದೆ. ದೇವಣಗಾಂವ ಸಮೀಪದ ಸೊನ್ನ ಬ್ಯಾರೇಜ್ ನಲ್ಲಿ ಗುರುವಾರ 3 ಲಕ್ಷ 50 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿತ್ತು. ಶುಕ್ರವಾರ ಬೆಳಗ್ಗಿನ ಶುಭೋದಯ ಸ್ವಲ್ಪ ಪ್ರಮಾಣದಲ್ಲಿ ಏರಿಕೆ ಕಂಡು ಸಾಯಂಕಾಲದ ವರೆಗೆ ಅದೇ ರೀತಿ ಮುಂದುವರೆದಿದೆ.

ಹಳೇ ತಾರಾಪುರ ಗ್ರಾಮದಲ್ಲಿ ವಾಸವಾಗಿದ್ದ ಕುಟುಂಬಗಳನ್ನು ಬೋಟ್ ಗಳ ಮೂಲಕ ರಕ್ಷಿಸಲಾಯಿತು

ಶುಕ್ರವಾರ ಸೊನ್ನ ಬ್ಯಾರೇಜಿನಲ್ಲಿ 3 ಲಕ್ಷ 55 ಸಾವಿರ ಕ್ಯೂಸೆಕ್ಸ್ ನೀರು 28 ಗೇಟ್ ಗಳ ಮೂಲಕ ಹೊರ ಬಿಡಲಾಗುತ್ತಿದೆ. ಸೀನಾ ನದಿಯಿಂದ 2 ಲಕ್ಷ 15 ಸಾವಿರ ಕ್ಯೂಸೆಕ್ಸ್ ಉಜನಿ ಮತ್ತು ವೀರ ಜಲಾಶಯಗಳಿಂದ 80 ಸಾವಿರ ಕ್ಯೂಸೆಕ್ಸ್ ಅಲ್ಲದೆ ಕರ್ನಾಟಕ ಮತ್ತು ಮಹಾರಾಷ್ಟ್ರದ ಭೀಮಾ ನದಿ ಪಾತ್ರದಲ್ಲಿ ಬೀಳುತ್ತಿರುವ ಮಳೆಯಿಂದ ಸುಮಾರು 60 ಸಾವಿರ ಕ್ಯೂಸೆಕ್ಸ್ ಒಟ್ಟು 3 ಲಕ್ಷ 55 ಸಾವಿರ ಕ್ಯೂಸೆಕ್ಸ್ ನೀರು ಸೊನ್ನ ಬ್ಯಾರೇಜ್ ನಲ್ಲಿ ಹರಿಯುತ್ತಿದೆ.

ಪ್ರವಾಹ ಸೃಷ್ಟಿ ಮಾಡಿರುವ ಸೀನಾ ನದಿ ಪಾತ್ರದಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆಯಾಗಿರುವುದರಿಂದ ನಾಳೆ ಮತ್ತು ನಾಡಿದ್ದು ಪ್ರವಾಹದಲ್ಲಿ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಅಫ್ಜಲಪುರ ಕೆ.ಎನ್.ಎನ್.ಎಲ್ ಎ.ಇ.ಇ ಸಂತೋಷ್ ಕುಮಾರ್ ಸಜ್ಜನ ತಿಳಿಸಿದ್ದಾರೆ. ಭೀಮಾ ನದಿ ತೀರದ ಗ್ರಾಮಗಳಾದ ಕಡಣಿ, ತಾರಾಪುರ, ತಾವರಖೇಡ, ಬ್ಯಾಡಗಿಹಾಳ, ಕುರುಬತಹಳ್ಳಿ, ಮಡ್ನಳ್ಳಿ, ದೇವಣಗಾಂವ, ಶಂಬೆವಾಡ, ಕಡ್ಲೆವಾಡ, ಕುಮಸಗಿ, ಚಿಕ್ಕ ಹಾವಳಗಿ, ಬಗಲೂರ, ಶಿರಸಿಗಿ, ಸೇರಿದಂತೆ ಅನೇಕ ಗ್ರಾಮಗಳ ಜನರು ತೋಟದ ವಸ್ತಿ ಜನರು ಜಾನುವಾರುಗಳು ಹಾಗೂ ಜಮೀನುಗಳಲ್ಲಿ ನೀರು ಹೊಕ್ಕಿರುವ ಪರಿಣಾಮ ಜನರು ತೊಂದರೆ ಅನುಭವಿಸುತ್ತಿದ್ದಾರೆ.

ಭೀಮಾ ನದಿಯ ನೀರಿಗೆ ಜಮೀನಿಗೆ ನುಗ್ಗಿದ ನೀರು

ಪ್ರವಾಹ ಪೀಡಿತ ಗ್ರಾಮಗಳಲ್ಲಿ ಇಂದು ಸರ್ಕಾರ ಕಾಳಜಿ ಕೇಂದ್ರಗಳನ್ನು ತೆರೆದಿದೆ ತಾರಾಪುರದಲ್ಲಿ 3 ಕುಟುಂಬಗಳು, ತಾವರಖೇಡದಲ್ಲಿ 3 ಕುಟುಂಬ, ದೇವಣಗಾಂವ 3 ಕುಟುಂಬ, ಕಡ್ಲೆವಾಡದಲ್ಲಿ 6 ಕುಟುಂಬ ಕುಮಸಿಗಿಯಲ್ಲಿ 40 ಕುಟುಂಬಗಳನ್ನು ರಕ್ಷಿಸಿ ನೋಡಲ್ ಅಧಿಕಾರಿ ಕೃಷಿ ಇಲಾಖೆಯ ಎ.ಡಿ ಪ್ರಶಾಂತ ಸನ್ನಿ, ಸಿಂದಗಿಯ ತಹಸಿಲ್ದಾರ್ ಕರೆಪ್ಪ ಬೆಳ್ಳಿ ಅವರ ನೇತೃತ್ವದಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.

ಹಳೆ ತಾರಾಪುರದಲ್ಲಿ ವಾಸವಾಗಿರುವ ಉಳಿದ ಎಲ್ಲಾ ಕುಟುಂಬಗಳನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿಲಾಗುತ್ತಿದೆ. ದೇವಣಗಾಂವದ ಹನುಮಾನ್ ದೇವಸ್ಥಾನ, ಶಾಂತೇಶ್ವರ ದೇವಸ್ಥಾನ, ಅಂಬಿಗರ ಚೌಡಯ್ಯ ದೇವಸ್ಥಾನ, ಕದಂಬ ಶಿಕ್ಷಣ ಸಂಸ್ಥೆಯ ಪ್ರಾಥಮಿಕ ಶಾಲೆ, ಬಾಲಕರ ವಸತಿ ನಿಲಯ, ಪ್ರಗತಿಪರ ಶಿಕ್ಷಣ ಸಂಸ್ಥೆಯ ಆವರಣ ಸಮೀಪ, ನೀರು ನುಗ್ಗಿದೆ. ಇಂದು ಶನಿವಾರ ಭೀಮಾ ನದಿ ನೀರು ಸಂಪೂರ್ಣ ಇಳಿಕೆ ಕಂಡಿದ್ದು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ರೇವಣಸಿದ್ದಯ್ಯ.ಜಿ ಹೀರೆಮಠ ಆಲಮೇಲ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button