ಮಡಿ-ಮೈಲಿಗೆಯನ್ನು ಮೀರಿ ನಿಂತವರು ಶ್ರೀಮಾತೆ ಶಾರದಾದೇವಿ – ಶ್ರೀಮತಿ ಜಿ.ಯಶೋಧಾ ಪ್ರಕಾಶ್ ಅಭಿಪ್ರಾಯ.

ಚಳ್ಳಕೆರೆ ಅ.06

ಶ್ರೀಮಾತೆ ಶಾರದಾದೇವಿಯವರು ಮಡಿ ಮೈಲಿಗೆಯನ್ನು ಮೀರಿ ನಿಂತವರು ಎಂದು ಚಳ್ಳಕೆರೆಯ ಶಿವನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ ಯಶೋಧಾ ಪ್ರಕಾಶ್ ತಿಳಿಸಿದರು.

ಶಿವ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಮಾಡುತ್ತ ಅವರು ಮಾತನಾಡಿದರು.

ಈ ಸತ್ಸಂಗದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಶ್ರೀದೇವಿಸ್ತುತಿ ಪಾರಾಯಣ,ಶ್ರೀಮತಿ ಗೀತಾ ಪ್ರಕಾಶ್ ಅವರಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು.

ಸತ್ಸಂಗದಲ್ಲಿ ಸದ್ಭಕ್ತರಾದ ಶ್ರೀಮತಿ ಕೆ.ಎಸ್ ವೀಣಾ, ಭಾಗ್ಯಲಕ್ಷ್ಮೀ, ವಿಜಯಲಕ್ಷ್ಮೀ, ವೀರಮ್ಮ, ಜಯಮ್ಮ, ಶಾಂತಮ್ಮ, ಯತೀಶ್ ಎಂ ಸಿದ್ದಾಪುರ, ಭ್ರಮರಂಭಾ, ಕವಿತಾ ಗುರುಮೂರ್ತಿ, ಪಿ.ಎಸ್ ಮಾಣಿಕ್ಯ ಸತ್ಯನಾರಾಯಣ, ಸರಸ್ವತಿ, ಸಂಗೀತ, ಜಯಶೀಲಮ್ಮ, ನಾಗರತ್ನಮ್ಮ, ಶಾರದಾಮ್ಮ, ಮಂಗಳಾ, ಗೀತಾಲಕ್ಷ್ಮೀ ಭಾಗವಹಿಸಿದ್ದರು.

ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button