ಸೆನ್ಸಾರ್ ಗೆ ಸಿದ್ಧವಾದ – “ಡೆತ್ ಸರ್ಟಿಫಿಕೇಟ್”.
ಮೈಸೂರು ಅ.29


ಚಿರು ಮೀಡಿಯಾ ಹೌಸ್ ಮೈಸೂರ ಅವರ ‘ಡೆತ್ ಸರ್ಟಿಫಿಕೆಟ್’ ಚಲನ ಚಿತ್ರದ ಪೋಸ್ಟ ಪ್ರೊಡಕ್ಷನ್ ಕಾರ್ಯ ಮುಗಿಸಿ ಇದೀಗ ಸೆನ್ಸಾರ್ ಗೆ ಹೋಗಲು ಸಿದ್ಧವಾಗಿದೆ. ಉತ್ತರ ಕರ್ನಾಟಕದ ನೈಜ ಭಾಷೆ, ವಾಸ್ತವಿಕ ಕಥಾಹಂದರ, ಗ್ರಾಮೀಣತೆಯ ಸೊಗಡು, ಮೇಕಪ್ ರಹಿತ ಕಲಾವಿದರು ಮುಂತಾದ ವೈಶಿಷ್ಟ್ಯಗಳಿಂದ ಕೂಡಿರುವ ಈ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ವೀರಾಪುರ, ನಾಗೂರ ಗ್ರಾಮಗಳಲ್ಲದೆ ಇನ್ನಿತರ ಸ್ಥಳಗಳಲ್ಲಿ ಒಂದೇ ಹಂತದಲ್ಲಿ ಸತತವಾಗಿ ಚಿತ್ರೀಕರಣ ನಡೆಸಿ ಮುಕ್ತಾಯ ಗೊಳಿಸಲಾಗಿದೆ.
ಉತ್ತರ ಕರ್ನಾಟಕದ ಜನರ ಬದುಕಿನ ನೈಜತೆಯನ್ನು ಇಲ್ಲಿ ಚಿತ್ರೀಕರಿಸಿದ್ದೇನೆ ಎಂದು ನಿರ್ದೇಶಕ ಗುರುದತ್ ಮುಸುರಿ ಹೇಳಿದರು. ಚಿತ್ರೀಕರಣಕ್ಕೆ ವೀರಾಪೂರ ಮತ್ತು ನಾಗೂರ ಗ್ರಾಮಗಳ ಸಮಸ್ತ ಜನತೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಅವರಿಗೆ ಎಷ್ಟು ಕೃತಜ್ಞತೆ ಹೇಳಿದರೂ ಕಡಿಮೆಯೇ ಎಂದು ಕಥೆಗಾರ ಹುನಗುಂದದ ಮಹಾಂತೇಶ ಹಳ್ಳೂರ ಹೇಳಿದರು.

ಈಗಾಗಲೇ ಬೆಂಗಳೂರಿನ ತಂಡ ಮೂವ್ಹಿ ಮೇಕರ್ಸ್ ಸ್ಟುಡಿಯೋದಲ್ಲಿ ಸಂಪೂರ್ಣ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಮುಗಿಸಿದ್ದು ಇದೀಗ ಸೆನ್ಸಾರ್ಗೆ ಸಿದ್ಧವಾಗಿದೆ. ನೈಜ ಘಟನೆಯನ್ನು ಕಥೆಯಾಗಿ ಬರೆದ ಮಹಾಂತೇಶ ಹಳ್ಳೂರ ಕಥೆ, ಚಿತ್ರಕಥೆ ಸಂಭಾಷಣೆಯನ್ನು ಬರೆದಿದ್ದಾರೆ. ಛಾಯಾ ಗ್ರಹಣದ ಜೊತೆ ನಿರ್ದೇಶನದ ಹೊಣೆಯನ್ನು ಗುರುದತ್ತ ಮುಸುರಿ ವಹಿಸಿದ್ದಾರೆ, ಸಂಗೀತ ಅಜಿತ್, ಪತ್ರಿಕಾ ಸಂಪರ್ಕ ಡಾ, ಪ್ರಭು ಗಂಜಿಹಾಳ ಡಾ, ವೀರೇಶ ಹಂಡಿಗಿ, ಸಹ ನಿರ್ದೇಶನ ಬಸಲಿಂಗಪ್ಪ ತೋಟದ, ಸಹಾಯಕ ನಿರ್ದೇಶನ ಶೇಷಗಿರಿ, ಸಂಕಲನ ಮಲ್ಲಿಕಾರ್ಜುನ, ಪ್ರೊಡಕ್ಷನ್ ಮ್ಯಾನೇಜರ್ ಮಹಾಂತೇಶ ಮಠ, ಚಿತ್ರದ ಸಹ ನಿರ್ಮಾಪಕರು ವಸಂತಾ ಹಳ್ಳೂರ ಆಗಿದ್ದಾರೆ.

ತಾರಾಂಗಣದಲ್ಲಿ ನಾಯಕ ನಟ ಮನ್ವೀತ್, ವಿಜಯಲಕ್ಷ್ಮಿ, ಮಹಾಂತೇಶ ಹಳ್ಳೂರ, ಬಸಲಿಂಗಪ್ಪ ತೋಟದ, ಜಯದೇವ ಗಂಜಿಹಾಳ, ಪ್ರವೀಣ ಭತ್ತದ, ಬಂಡು ಕಟ್ಟಿ, ಡಾ, ಚಂದ್ರನಾಥ ಒಂಟಕುದರಿ, ಮಂಜುಶ್ರೀ ಮಣಿ, ಹನಮಂತ ಮಸ್ಕಿ, ಮಹಾಂತೇಶ ಅಂಗಡಿ, ಮಹಾಂತೇಶ ಮಠ, ಮಹಾಂತೇಶ ಅಗಸಿಮುಂದಿನ, ಮಹಾಂತೇಶ ಅಂಗಡಿ, ನಾಗಪ್ಪ ಪೂಜಾರಿ, ಚಂದ್ರಶೇಖರ ಶಾಸ್ತ್ರಿ, ಸಂಗು ಮಠ, ಬಸನಗೌಡಾ ಹಿರೇಗೌಡ್ರ, ಮಹಾಂತೇಶ ಗಜೇಂದ್ರಗಡ, ವಿನೋದ ಹೂಗಾರ, ಢವಳಚಂದ ಪವಾರ, ಅನಂತ ಬಬಲೇಶ್ವರ, ಗುಡದೂರಕಲ್ಮಠ, ಗುರು ಮಠ, ಭೀಮರಾವ್ ಹಾಗೂ ವೀರಾಪುರ, ಗ್ರಾಮದ ಸಮಸ್ತ ಜನತೆ ಅಭಿನಯಿಸಿದ್ದಾರೆ. ಸೆನ್ಸಾರ್ ನಿಂದ ಹೊರ ಬರುತ್ತಿದ್ದಂತೆ ಚಲನ ಚಿತ್ರವನ್ನು ರಾಜ್ಯಾದ್ಯಂತ ಚಿತ್ರ ಮಂದಿರಗಳಲ್ಲಿ ಬಿಡುಗಡೆ ಮಾಡುವದಾಗಿ ಚಿರು ಮೀಡಿಯಾ ಹೌಸ್ ತಿಳಿಸಿದೆ.
*****
ಡಾ, ಪ್ರಭು ಗಂಜಿಹಾಳ
ಮೊ:೯೪೪೮೭೭೫೩೪೬

