ನೀರಿರುವ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದಿರುವ – ಹಸು ಜೀವಂತ ರಕ್ಷಣೆ.
ತಮ್ಮನಾಯಕನಹಳ್ಳಿ ನ.10

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ತಮ್ಮನಾಯಕನಹಳ್ಳಿ ಗ್ರಾಮದಲ್ಲಿ ರೆಡ್ಡೆಣ್ಣ ಎಂಬುವವರ ಹೋಲದಲ್ಲಿ ಅಂದಾಜು 10 ಅಡಿ ಅಗಲ 15 ಅಡಿ ಉದ್ದ ಹಾಗೂ 14 ಅಡಿ ಆಳದ ತೇರೆದ ನೀರಿರುವ ಕೃಷಿ ಹೊಂಡದಲ್ಲಿ ಆಕಸ್ಮಿಕವಾಗಿ ಆಂಜನೇಯ ಎಂಬುವವರ ಹಸು ಕಾಲು ಜಾರಿ ಬಿದ್ದಿದ್ದು, ಸದರಿ ಸ್ಥಳೀಯ ನಿವಾಸಿಗಳು ಘಟನೆಯ ವಿಷಯವನ್ನು ಚಿಕ್ಕಬಳ್ಳಾಪುರ ಅಗ್ನಿಶಾಮಕ ಠಾಣೆಯ ನಿಯಂತ್ರಣ ಕೊಠಡಿಗೆ ದೇವರಾಜ ರವರು ದೂರವಾಣಿಗೆ ಕರೆ ಮಾಡಿ ತಿಳಿಸಿದರು. ಕರೆ ಬಂದ ತಕ್ಷಣ ಜಲ ವಾಹನದೊಂದಿಗೆ ಅಗ್ನಿಶಾಮಕ ತಂಡ ಸ್ಥಳಕ್ಕೆ ದೌಡಾಯಿಸಿ ಕಾರ್ಯ ಪ್ರವೃತ್ತರಾಗಿ ಸುಮಾರು 14 ಅಡಿ ಆಳದ ಬಾವಿಯಲ್ಲಿ ನಿಚ್ಚಣಕಿ, ಹಗ್ಗಗಳ ಸಹಾಯದಿಂದ ಕೆಳಗಿಳಿದು ಸುಮಾರು 00:50 ಐವತ್ತೂ ನಿಮಿಷಗಳ ಕಾಲ ಶ್ರಮ ವಹಿಸಿ ಸಿಬ್ಬಂದಿಯವರು ಹಸುವನ್ನು ಜೀವಂತವಾಗಿ ಅಗ್ನಿಶಾಮಕ ಇಲಾಖೆಯ ತಂಡ ರಕ್ಷಣೆ ಮಾಡಿರುತ್ತಾರೆ.


ಈ ಸಮಯ ಪ್ರಜ್ಞೆ ಕಾರ್ಯವನ್ನು ವೀಕ್ಷಿಸಿದ ತಮ್ಮನಾಯಕನಹಳ್ಳಿ ಗ್ರಾಮದ ಸ್ಥಳೀಯ ನಿವಾಸಿಗಳು ಅಗ್ನಿಶಾಮಕ ತಂಡದ ಕಾರ್ಯ ದಕ್ಷತೆಯನ್ನು ಮೆಚ್ಚಿ ಶ್ಲಾಘಿಸಿ ಹಾಗೂ ಹಸ್ತಲಾಘವ ಮಾಡಿ ಹಸುವಿನ ಪ್ರಾಣ ರಕ್ಷಣೆ ಮಾಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು.ಶ್ರೀ ಕರಿಯಣ್ಣ.ಎಸ್ ಕೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರವರು ನೇತ್ರತ್ವದಲ್ಲಿ, ರವೀಂದ್ರ ಸಂಗಮ, ನಾಗಪ್ಪ ಶಿವಾಪುರ, ಸಿದ್ದಪ್ಪ ಜರಳಿ, ರವಿಚಂದ್ರ. ಬಾನೋಶಿ, ಮಲ್ಲಿಕಾರ್ಜುನ ಕಾಡಪ್ಪನವರ ಹಾಗೂ ಗಣೇಶ್ ಬಿರ ಗೌಡ. ಭಾಗವಹಿಸಿದ್ದರು.

