ಸಿಬ್ಬಂದಿ ಕೊರತೆಯಿಂದ ಆಧಾರ್ ಸೇವೆ ಸ್ಥಗಿತ, ಮುದ್ದೇಬಿಹಾಳದಲ್ಲಿ ಮೂರು ತಿಂಗಳಿಂದ – ಜನ ಸಾಮಾನ್ಯರ ಪರದಾಟ.
ಮುದ್ದೇಬಿಹಾಳ ಜ.09

ಪಟ್ಟಣದ ಆಡಳಿತ ಸೌಧದಲ್ಲಿರುವ ತಹಶಿಲ್ದಾರರ ಕಚೇರಿಯಲ್ಲಿ ಆಧಾರ್ ಕಾರ್ಡ್ ನೊಂದಣಿ ಹಾಗು ತಿದ್ದುಪಡಿ ಕಾರ್ಯಕ್ಕೆ ಅಗತ್ಯ ಸಿಬ್ಬಂದಿ ನೀ ಯೋಜನೆ ಆಗದೆ ಇರುವುದರಿಂದ ಕಳೆದ ಮೂರು ತಿಂಗಳಿಂದ ಜನ ಸಾಮಾನ್ಯರು ತೀವ್ರ ಅನಾನುಕೂಲಕ್ಕೆ ಒಳಗಾಗಿದ್ದಾರೆ.
ಆಧಾರ್ ಕಾರ್ಡ್ ಪ್ರತಿಯೊಬ್ಬ ನಾಗರಿಕನಿಗೂ ಅಗತ್ಯ ದಾಖಲೆಯಾಗಿದ್ದು, ಬ್ಯಾಂಕ್ ವ್ಯವಹಾರ ಪಿಂಚಣಿ, ವಿದ್ಯಾರ್ಥಿವೇತನ, ರೇಷನ್ ಕಾರ್ಡ್, ಆರೋಗ್ಯ ಸೇವೆ, ಸೇರಿದಂತೆ ಬಹುತೇಕ ಸರಕಾರಿ ಸೌಲಭ್ಯಗಳಿಗೆ ಇದು ಕಡ್ಡಾಯವಾಗಿದೆ. ಆದರೆ ಸಿಬ್ಬಂದಿ ಕೊರತೆಯಿಂದ ಆಧಾರ್ ನೋಂದಣಿ ಹಾಗು ತಿದ್ದುಪಡಿ ಕಾರ್ಯ ಸಂಪೂರ್ಣ ಸ್ಥಗಿತ ಗೊಂಡಿರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದೆ.
ಗ್ರಾಮೀಣ ಪ್ರದೇಶಗಳಿಂದ ದೂರದ ಊರಿನಿಂದ ಆಗಮಿಸುವ ವೃದ್ಧರು, ಮಹಿಳೆಯರು, ವಿದ್ಯಾರ್ಥಿಗಳು, ಹಾಗೂ ಕಾರ್ಮಿಕರು, ಕಚೇರಿ ಮುಂದೆ ಬಂದು ನೀರಾಶರಾಗಿ ಮರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವರು ಖಾಸಗಿ ಕೇಂದ್ರಗಳಿಗೆ ಹೋಗಿ ಹೆಚ್ಚಿನ ಹಣ ವ್ಯಹ ಮಾಡಬೇಕಾದ ಪರಿಸ್ಥಿತಿಯು ಎದುರಾಗಿದೆ ಎಂಬುದು ಸಾರ್ವಜನಿಕರ ಆರೋಪವಾಗಿದೆ.
“ಆಧಾರ್ ತಿದ್ದುಪಡಿ ಆಗದೆ ಪಿಂಚಣಿ ನಿಂತಿದೆ” ಮಕ್ಕಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಆಗುತ್ತಿಲ್ಲ” “ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಲಾಗದೆ ತೊಂದರೆ ಅನುಭವಿಸುತ್ತಿದ್ದೇವೆ ” ಎಂದು ಸಾರ್ವಜನಿಕರು ಅಳಲು ತೋಡಿಕೊಂಡಿದ್ದಾರೆ.
ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಗಳು ಕೂಡಲೇ ಗಮನಹರಿಸಿ, ತಹಸಿಲ್ದಾರರ ಕಚೇರಿಗೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ ಆಧಾರ್ ಸೇವೆಯನ್ನು ಪುನರಾರಂಭಿಸಬೇಕು ಎಂಬುದು ಮುದ್ದೇಬಿಹಾಳದ ಜನಸಾಮಾನ್ಯರ ಆಗ್ರಹವಾಗಿದೆ.
ಸರ್ಕಾರ ತ್ವರಿತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಸಾರ್ವಜನಿಕರಿಂದ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಬಸವರಾಜ. ಸಂಕನಾಳ ಮುದ್ದೇಬಿಹಾಳ

