ಜಲಕ್ರಾಂತಿಯ ಹರಿಕಾರ ಶ್ರೀ ಸಿದ್ದರಾಮೇಶ್ವರ – ಜಯಂತಿ ಆಚರಣೆ.

ಕೊಟ್ಟೂರು ಜ.16

ಕೊಟ್ಟೂರು ತಾಲೂಕ ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಶ್ರೀ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು. ಸಿದ್ದರಾಮೇಶ್ವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ ತಹಶೀಲ್ದಾರರಾದ ಅಮರೇಶ.ಜಿ ಕೆ ಅವರು ಮಹಾನ್ ವಚನಕಾರ, ತತ್ವಜ್ಞಾನಿ, ಸಾಮಾಜಿಕ ಸುಧಾರಕ, ಕರ್ಮಯೋಗಿ, ಕೆರೆ, ಕಟ್ಟೆ, ದೇವಸ್ಥಾನಗಳನ್ನು ನಿರ್ಮಿಸುವುದರ ಮೂಲಕ ಸಮಾಜ ಮುಖಿಯಾಗಿ ಕಾರ್ಯನಿರ್ವಹಿಸಿದ, ಅನುಭವ ಮಂಟಪದ 3 ನೇ. ಅಧ್ಯಕ್ಷರಾಗಿದ್ದ, ಸಾವಿರಾರು ವಚನಗಳನ್ನು ರಚಿಸುವ ಮೂಲಕ ಸಾಮಾಜಿಕ ಸಮಾನತೆ, ಮೂಢನಂಬಿಕೆ, ಅನಿಷ್ಟಗಳನ್ನು ತೊಲಗಿಸಲು ಪ್ರಯತ್ನಿಸಿ ಕರ್ತವ್ಯವೇ ದೇವರೆಂದು ನಂಬಿದ್ದ ಸಮತೆಯ ಗಾರುಢಿಗರಾದ ಶ್ರೀ ಸಿದ್ದರಾಮೇಶ್ವರ ಜಯಂತಿಯನ್ನು ಅವರು ಸಮಾಜಕ್ಕೆ ನೀಡಿದ ಸೇವೆಯನ್ನು ಸ್ಮರಿಸುತ್ತಾ, ಶರಣರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲರೂ ನಡೆಯಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮುಖಂಡರಾದ ದೊಡ್ಡರಾಮಣ್ಣ, ಅಧ್ಯಕ್ಷ ಹುಲುಗಪ್ಪ, ಮುಖಂಡರಾದ ವಿ.ಟಿ.ಎಸ್ ತಿಪ್ಪೇಸ್ವಾಮಿ ವೆಂಕಟೇಶ್, ಪಿ.ಹೆಚ್ ಪಂಪಣ್ಣ, ಸಣ್ಣ ರಾಮಪ್ಪ, ಪಿಡಬ್ಲುಡಿ ಇಂಜಿನಿಯರ್ ಕೊಟ್ರೇಶ್ ಹಾಗೂ ಇತರೆ ಭೋವಿ ಸಮಾಜದ ಮುಖಂಡರು ಭಾಗವಹಿಸಿದ್ದರು. ನಂತರ ಗಣೇಶನ ದೇವಸ್ಥಾನದಿಂದ ಪಟ್ಟಣದಲ್ಲಿ ಅದ್ದೂರಿಯಾಗಿ ಶ್ರೀ ಸಿದ್ದಾರೇಶ್ವರ ಭಾವಚಿತ್ರದ ಮೆರವಣಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ತಹಶೀಲ್ದಾರರು ಮೆರವಣಿಗೆಗೆ ಚಾಲನೆ ನೀಡಿದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್ ಕುಮಾರ್ ಸಿ ಕೊಟ್ಟೂರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button