ಫೆಬ್ರವರಿ 19 ರಂದು ಶ್ರೀರಾಮಕೃಷ್ಣರ – ಜಯಂತ್ಯುತ್ಸವ ಆಚರಣೆ.
ಚಳ್ಳಕೆರೆ ಫೆ.18

ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಫೆಬ್ರವರಿ 19 ರ ಗುರುವಾರ ಸಂಜೆ 5:30 ರಿಂದ ಶ್ರೀರಾಮಕೃಷ್ಣ ಪರಮಹಂಸರ 191 ನೇ. ಜಯಂತ್ಯುತ್ಸವದ ಪ್ರಯುಕ್ತ ವಿಶೇಷ ಭಜನೆ,108 ಶ್ರೀರಾಮಕೃಷ್ಣರ ನಾಮಸ್ಮರಣೆ ಜರುಗುವುದು.

ದಿವ್ಯತ್ರಯರಿಗೆ ಮಂಗಳಾರತಿ ಮತ್ತು ಪೂಜ್ಯ ಮಾತಾಜೀ ತ್ಯಾಗಮಯೀ ಅವರಿಂದ ವಿಶೇಷ ಪ್ರವಚನ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀಶಾರದಾಶ್ರಮದ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

