ಶ್ರೀಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮಕೃಷ್ಣರ 191 ನೇ. – ಜಯಂತ್ಯುತ್ಸವ ಆಚರಣೆ.

ಚಳ್ಳಕೆರೆ ಫೆ.24

ನಗರದ ವಾಲ್ಮೀಕಿ ನಗರದ ಶ್ರೀಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಾರ್ಚ್ 1 ರ ಭಾನುವಾರ ಬೆಳಗ್ಗೆ 10:30 ರಿಂದ ಮಧ್ಯಾಹ್ನ 1:30 ರ ವರೆಗೆ‌ ತ್ಯಾಗರಾಜ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದಿಂದ “ಶ್ರೀರಾಮಕೃಷ್ಣ ಪರಮ ಹಂಸರ 191 ನೇ. ಜಯಂತ್ಯುತ್ಸವ” ದ ಪ್ರಯುಕ್ತ ವಿಶೇಷ ಭಜನೆ ಮತ್ತು ಪ್ರವಚನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು.

ಬೆಳಿಗ್ಗೆ 10:30 ರಿಂದ ಬೆಂಗಳೂರಿನ ಶ್ರೀಶಾರದಾದೇವಿ ಪ್ರಗತಿ ಮಂದಿರದ ವಿದ್ಯಾರ್ಥಿನಿ ಕುಮಾರಿ ಚಿನ್ಮಯಿ ರಾವ್ ಮತ್ತು ಸಂಗಡಿಗರಿಂದ “ಶ್ರೀರಾಮಕೃಷ್ಣ ಗಾನ ಸುಧೆ” 11:30 ರಿಂದ ಹಿರಿಯೂರಿನ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ಚೈತನ್ಯಮಯೀ ಅವರಿಂದ “ಅವತಾರ ವರಿಷ್ಠ ಶ್ರೀರಾಮಕೃಷ್ಣ” ಎಂಬ ವಿಷಯವಾಗಿ ಪ್ರವಚನ 12:15 ರಿಂದ “ಸ್ವಾಮಿ ವಿವೇಕಾನಂದರ ಗುರು” ಎಂಬ ವಿಷಯವಾಗಿ ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ಅವರು ಪ್ರವಚನ ನಡೆಸಿ ಕೊಡಲಿದ್ದು.

ಮಧ್ಯಾಹ್ನ 1:30 ಕ್ಕೆ ಅನ್ನಪ್ರಸಾದ ವಿನಿಯೋಗ ನಡೆಯಲಿದ್ದು ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆದು ಕೊಳ್ಳುವಂತೆ ತ್ಯಾಗರಾಜ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಎಚ್.ಲಕ್ಷ್ಮೀದೇವಮ್ಮ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button