ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಹೊಂದಬೇಕು ಎಂದರೆ – ಶಿಕ್ಷಕರಂತೆ ಪಾಲಕರು ಜವಾಬ್ದಾರರು.

ಆಲಮೇಲ ಮಾ.07

ಗ್ರಾಮೀಣ ಬಾಗದ ಬಡ ಜನರ ಮಕ್ಕಳು ಶಿಕ್ಷಣದಿಂದ ವಂಚಿತರಾಗ ಬಾರದು ಎಂದು 30 ವರ್ಷಗಳ ಹಿಂದೆ ಆರಂಭಿಸಿ ಹೆಮ್ಮರವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಶಿವುಕುಮಾರ ಗುಂದಗಿ ಹೇಳಿದರು.

ಅವರು ಪಟ್ಟಣದ ಗ್ರಾಮೀಣ ಅಭಿವೃದ್ಧಿ ವಿದ್ಯಾವರ್ಧಕ ಸಂಸ್ಥೆಯ ಪ್ರಾಥಮಿಕ ಶಾಲೆಯ 7 ನೇ. ತರಗತಿ ವಿದ್ಯಾರ್ಥಿಗಳ ಬಿಳ್ಕೋಡುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಬಾಗದ ಮಕ್ಕಳಿಗಾಗಿ ಆರಂಭಿಸಿದ ಈ ಸಂಸ್ಥೆ ಇಂದು ಪ್ರಾಥಮಿಕ ದಿಂದ ಪದವಿ ಮಹಾ ವಿದ್ಯಾಲಯದ ವರೆಗೆ ಒಂದೆ ಸಂಸ್ಥೆಯಲ್ಲಿ ಕಲಿಯುವಂತೆ ವ್ಯವಸ್ಥೆ ಮಾಡಲಾಗಿದೆ ಅದಕ್ಕೆ ಜನರ ಸಹಕಾರದಿಂದ ಈ ಮಟ್ಟಕ್ಕೆ ಬೆಳದಿದೆ ಎಂದು ಹೆಳಿದರು ಎಂದರು.

ಮಕ್ಕಳು ಶಿಕ್ಷಣದಲ್ಲಿ ಉತ್ತಮ‌‌‌ ಸಾಧನೆ ಮಾಡಬೇಕು ಎಂದರೆ ಶಿಕ್ಷರಷ್ಟೆ ಪಾಲಕರ ಜವಾಬ್ದಾರಿ ಮಯಖ್ಯವಾಗಿದೆ ಎಂದು ಹೇಳಿದರು.

ತಾಲೂಕ ಮತ್ತು ಜಿಲ್ಲಾ ಮಟ್ಟದಲ್ಲಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೆತ ವಿದ್ಯಾರ್ಥಿಗಳಿಗರ ಪ್ರಶಸ್ತಿ ನೀಡಿ ಗೌರವಿಸಿ ಅಭಿನಂದಿಸಿದರು. ರಾಂಪೂರದ ನಿತ್ಯಾನಂದ ಮಹಾ ರಾಜರು ಸಾನಿದ್ಯ ವಹಿಸಿದ್ದರು.

ಮುಖ್ಯ ಶಿಕ್ಷಕ ಜಿ.ಕೆ ಅಂಬೂರೆ, ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಎಸ್.ಆರ್ ಪೂಜಾರ, ಕಾನಿಪ ಅಧ್ಯಕ್ಷ ಅವಧೂತ ಬಂಡಗಾರ, ಪಾಲಕ ಪ್ರತಿನಿದಿಗಳಾದ ಸೌದಾಗರ, ಮಾಡ್ಯಾಳ ಹಾಗೂ ಶಾಲೆಯ ಶಿಕ್ಷಕ ಸಿಬ್ಬಂದಿ ಇದ್ದರು.

ಶಿಕ್ಷಕಿ ಕವಿತಾ ಪಶುಪತಿಮಠ ಸ್ವಾಗತಿಸಿದರು, ರೂಪಾ ಪಾಟೀಲ ನಿರೂಪಿಸಿ ವಂದಿಸಿದರು. 6Alm-1 ಆಲಮೇಲ ಗ್ರಾಮೀಣ ಅಭಿವೃದ್ಧಿ ಶಾಲೆಯಲ್ಲಿ ವಿವಿಧ ಚಟುವಟಿಕೆ, ಕ್ರೀಡೆಯಲ್ಲಿ ವಿಜೆತ ಮಕ್ಕಳಿಗೆ ಗೌರವಿಸಿ ಅಭಿನಂದಿಸಿದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ರೇವಣಸಿದ್ದಯ್ಯ.ಜಿ ಹಿರೇಮಠ ಆಲಮೇಲ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button