ಭಾರತೀಯ ಸನಾತನ ಸಂಸ್ಕೃತಿ ವಿಶಿಷ್ಟವಾದದ್ದು – ಶ್ರೀಮತಿ ಹೆಚ್.ಸಿ.ಗೀತಾ ಪ್ರಕಾಶ್ ಅಭಿಮತ.

ಚಳ್ಳಕೆರೆ ಮಾ.27

ಭಾರತೀಯ ಸನಾತನ ಸಂಸ್ಕೃತಿಯು ವಿಶಾಲ ವ್ಯಾಪ್ತಿಯನ್ನು ಒಳಗೊಂಡಿರುವ ಅತ್ಯಂತ ವಿಶಿಷ್ಟ ಸಂಸ್ಕೃತಿ ಎಂದು ಚಳ್ಳಕೆರೆಯ ತ್ಯಾಗರಾಜನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಸದಸ್ಯೆ ಶ್ರೀಮತಿ ಹೆಚ್.ಸಿ.ಗೀತಾ ಪ್ರಕಾಶ್ ತಿಳಿಸಿದರು.

ಗಾಂಧಿ ನಗರದ ತಮ್ಮ ಮಂಜುನಾಥ ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ಭಾರತೀಯ ಸನಾತನ ಸಂಸ್ಕೃತಿ ಮತ್ತು ಪರಂಪರೆ” ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡುತ್ತಾ ಮಾತನಾಡುತ್ತಿದ್ದರು.

ಭಾರತೀಯ ಸನಾತನ ಸಂಸ್ಕೃತಿಯ ಸಾಹಿತ್ಯ,ಸಂಗೀತ ಶಿಲ್ಪಕಲೆ, ಆಚಾರ-ವಿಚಾರಗಳು, ಲೋಕ ರೂಢಿ, ಸಂಪ್ರದಾಯಗಳು, ಸಾಂಸ್ಕೃತಿಕ ಮೌಲ್ಯಗಳು ಸನಾತನ ಸಂಸ್ಕೃತಿಯ ಹೆಗ್ಗುರುತುಗಳಾಗಿದ್ದು ಇವುಗಳನ್ನು ನಮ್ಮ ದಿನನಿತ್ಯದ ಬದುಕಿನಲ್ಲಿ ಆಚರಣೆ ಮಾಡುವುದರ ಮೂಲಕ ಅವುಗಳನ್ನು ಉಳಿಸಿ-ಬೆಳೆಸುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು ರಾಮಾಯಣದಲ್ಲಿ ಕಂಡು ಬರುವ ಶತ್ರುವಿಗೂ ವಿಜಯವನ್ನು ಹಾರೈಸುವ, ಹೊಂದಾಣಿಕೆ, ಭ್ರಾತೃತ್ವ, ಸೌಹಾರ್ದತೆ, ಪಾತಿವ್ರತ್ಯದ ಮೌಲ್ಯಗಳು ನಮಗೆ ಮಾದರಿಯಾಗಿವೆ. ಮಹಾ ಕುಂಭಮೇಳ ಮತ್ತು ಸಕಲ ದೇವತೆಗಳ ತಾಣವಾದ ಗೋವು, ಸತ್ಸಂಗ ಸನಾತನ ಪರಂಪರೆಯ ಪ್ರತೀಕಗಳಾಗಿವೆ ಎಂದು ಹೇಳಿದರು.

ಸತ್ಸಂಗದ ಪ್ರಯುಕ್ತ ಸತ್ಸಂಗ ಕೇಂದ್ರದ ಸದ್ಭಕ್ತರಿಂದ ಸಾಮೂಹಿಕ ಶ್ರೀರಾಮರಕ್ಷಾ ಸ್ತೋತ್ರ ಪಠಣ, ಶ್ರೀರಾಮಕೃಷ್ಣರ ನಾಮಸ್ಮರಣೆ, ಕದಳಿ ವಚನ ಮಂಡಳಿ ಮತ್ತು ಶ್ರೀರಾಧಾ ಮಾಧವ ಭಜನಾ ಮಂಡಳಿಯ ಶ್ರೀಮತಿ ಪರಿಮಳಾ ನಾಗರಾಜ್, ತಿಪ್ಪಮ್ಮ ಉಮಾಶಂಕರ್ ಅವರಿಂದ ವಿಶೇಷ ಭಜನೆ ನಡೆದರೆ ಯತೀಶ್ ಎಂ ಸಿದ್ಧಾಪುರ ಅವರು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣವನ್ನು ನಡೆಸಿಕೊಟ್ಟರು. ಕೊನೆಯಲ್ಲಿ ದಿವ್ಯತ್ರಯರಿಗೆ ಮಂಗಳಾರತಿ, ಅನ್ನಪ್ರಸಾದ ವಿನಿಯೋಗ ನಡೆಯಿತು.

ವಿಶೇಷ ಸತ್ಸಂಗ ಸಭೆಯಲ್ಲಿ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ, ಶ್ರೀಮತಿ ಎಂ ಗೀತಾ ನಾಗರಾಜ್, ಪಿ‌.ಎಸ್.ಮಾಣಿಕ್ಯ ಸತ್ಯನಾರಾಯಣ, ವೀರಶೈವ ಮಹಿಳಾ ಸಂಘದ ಅಧ್ಯಕ್ಷೆ ಪದ್ಮ ನಾಗರಾಜ್, ಗೀತಾ ನಾಗರಾಜ್, ತಳುಕಿನ ತೊಯಜಾಕ್ಷಿ, ವಿಜಯಾಗುರು, ಮಾನಸ, ಸೃಷ್ಟಿ, ಅಭಿಜ್ವಲ್, ಪ್ರಮೀಳಾ ಜಗದೀಶ್, ಸುಮನಾ ಕೋಟೇಶ್ವರ, ವಿಜಯಾ ರಾಜೇಂದ್ರ, ಲೀಲಾವತಿ, ವೀರಮ್ಮ, ದ್ರಾಕ್ಷಾಯಣಿ, ಜಯಮ್ಮ, ರಶ್ಮಿ ವಸಂತ, ಸಂಗೀತ, ಗೀತಾ ವೆಂಕಟೇಶ್ ರೆಡ್ಡಿ, ಅನ್ವಿಕಾ, ಜಗದಂಬಾ, ಗೀತಾ ಸುಂದರೇಶ್, ಸರಸ್ವತಿ, ಶೃಜನಿ ಸೇರಿದಂತೆ ಸದ್ಭಕ್ತರು ಭಾಗವಹಿಸಿದ್ದರು.

ವರದಿ-ಯತೀಶ್ ಎಂ ಸಿದ್ಧಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button