🚨BREAKING NEWS🚨 ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ವಡ್ಡರ್ಸೆ – ಭಗೀರಥ ಪ್ರಯತ್ನಕ್ಕೆ ಸಂದ ಜಯ..!
ಉಡುಪಿ/ಕುಂದಾಪುರ ಜೂ.06

ಗ್ರಾಮೀಣ ಭಾಗದ ಐತಿಹಾಸಿಕ ದೇವಸ್ಥಾನಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸದಾ ಕಟಿಬದ್ಧವಾಗಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ. ವಡ್ಡರ್ಸೆಯ ಸುಪ್ರಸಿದ್ಧ “ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ” ಸಮಗ್ರ ಅಭಿವೃದ್ಧಿಗೆ ಮುಜರಾಯಿ ಇಲಾಖೆಯ ಸಚಿವರಾದ “ರಾಮಲಿಂಗ ರೆಡ್ಡಿ” ಅವರು ಭರ್ಜರಿ “₹5 ಲಕ್ಷ ರೂಪಾಯಿಗಳ ಅನುದಾನವನ್ನು” ಬಿಡುಗಡೆ ಗೊಳಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
📌 ಪ್ರಮುಖ ಮುಖ್ಯಾಂಶಗಳು:-
ಮನವಿಗೆ ತಕ್ಷಣ ಸ್ಪಂದಿಸಿದ ಸಚಿವರು:-
ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ನಾಯಕರಾದ.

ಅಜಿತ್ ಕುಮಾರ್ ಶೆಟ್ಟಿ ವಡ್ಡರ್ಸೆ:-
ಅವರು ಕ್ಷೇತ್ರದ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಮುಜರಾಯಿ ಸಚಿವರಿಗೆ ಖುದ್ದಾಗಿ ವಿಶೇಷ ಮನವಿ ಸಲ್ಲಿಸಿದ್ದರು. ಯುವ ನಾಯಕನ ಕಾಳಜಿಗೆ ತಕ್ಷಣವೇ ಸ್ಪಂದಿಸಿದ ಸಚಿವರು ಈ ಅನುದಾನವನ್ನು ಮಂಜೂರು ಮಾಡಿದ್ದಾರೆ.

ಊರ ದೇವಸ್ಥಾನದ ಅಭಿವೃದ್ಧಿಗೆ ಪಣ:-
“ನಮ್ಮೂರಿನ ದೇವಸ್ಥಾನದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ” ಎಂದು ಪಣತೊಟ್ಟು, ನಿರಂತರವಾಗಿ ಬೆನ್ನುಬಿದ್ದು ಈ ಬೃಹತ್ ಅನುದಾನವನ್ನು ಮಂಜೂರು ಮಾಡಿಸುವಲ್ಲಿ ಅಜಿತ್ ಕುಮಾರ್ ಶೆಟ್ಟಿ ಅವರು ಸಂಪೂರ್ಣ ಯಶಸ್ವಿ ಯಾಗಿದ್ದಾರೆ.
ಗ್ರಾಮಸ್ಥರಲ್ಲಿ ಹರ್ಷ – ಕೃತಜ್ಞತೆ ಸಲ್ಲಿಕೆ:-
ಈ ಮಹತ್ತರ ಕಾರ್ಯಕ್ಕೆ ವಡ್ಡರ್ಸೆ ಗ್ರಾಮದ ಸಮಸ್ತ ಮಹಾ ಜನತೆ ಹಾಗೂ ದೇವಸ್ಥಾನದ ಭಕ್ತಭಿಮಾನಿಗಳು ಸಚಿವರಾದ ರಾಮಲಿಂಗ ರೆಡ್ಡಿ ಅವರಿಗೆ ಹಾಗೂ ಶ್ರಮಿಸಿದ ಯುವ ನಾಯಕ ಅಜಿತ್ ಕುಮಾರ್ ಶೆಟ್ಟಿ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ವರದಿ:ಆರತಿ.ಗಿಳಿಯಾರು.ಉಡುಪಿ

