‘ಕಾಲಘಟ್ಟ’ ಚಿತ್ರದ ‘ಸಮಯವು ನಿನ್ನ ಬದುಕಿನ – ಮಾಲೀಕ ಹಾಡು’ ಬಿಡುಗಡೆ.

ಬೆಂಗಳೂರು ಜೂ.17

ದಿಕ್ಷೀತಾ ಎಂಟರ್ ಪ್ರೈಸೆಸ್ ಬೆಂಗಳೂರು ಅವರ ‘ಕಾಲಘಟ್ಟ’ ಕನ್ನಡ ಚಲನ ಚಿತ್ರದ “ಸಮಯವು ನಿನ್ನ ಬದುಕಿನ ಮಾಲೀಕ, ಕಾಲಕ್ಕೆ ಗೌರವ ಕೊಡ ಬೇಕು ಜನಕ” ಹಾಡು ಬಿಡುಗಡೆ ಯಾಗಿ ಯ್ಯೂಟೂಬ್‌ ದಲ್ಲಿ ಭರ್ಜರಿ ಸದ್ದು ಮಾಡುತ್ತಿದೆ.

ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಥಾ ಹಂದರ ಹೊಂದಿರುವ ‘ಕಾಲಘಟ್ಟ’ ಚಿತ್ರದ ಎರಡನೇ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ ಯಾಗಿ ೧೮೦ ಕೆ ವೀಕ್ಷಣೆ ಪಡೆದು ಸಿನಿ ಪ್ರಿಯರ ಗಮನ ಸೆಳೆಯುತ್ತಿದೆ. ಅರ್ಥ ಪೂರ್ಣ ಸಾಲುಗಳ ಮೂಲಕ ಸಮಯದ ಮಹತ್ವವನ್ನು ಸಾರುವ ಈ ಹಾಡು ಎಲ್ಲರ ಮನ ಮುಟ್ಟುತ್ತಿದೆ.

ಈ ಹಾಡಿಗೆ ಋಷಿ ಸಾಹಿತ್ಯ ರಚಿಸಿದ್ದು, ಗಾಯಕ ಮಹೇಶ ತಮ್ಮ ಮಧುರ ಕಂಠದ ಮೂಲಕ ಹಾಡಿಗೆ ಜೀವ ತುಂಬಿದ್ದಾರೆ. ಸಂಗೀತ ನಿರ್ದೇಶಕ ಎ.ಎಂ.ನೀಲ್ ಅವರ ಸಂಗೀತ ಸಂಯೋಜನೆ ಹಾಡಿನ ವಿಶೇಷ ಆಕರ್ಷಣೆ ಯಾಗಿದೆ.

“ಕಾಲದ ಮಹತ್ವವನ್ನು ಪ್ರತಿಯೊಬ್ಬರಿಗೂ ನೆನಪಿಸುವ ಉದ್ದೇಶದಿಂದ ಈ ಹಾಡನ್ನು ರೂಪಿಸಿದ್ದೇವೆ. ಯುವ ಜನತೆಗೆ ಹಾಗೂ ಕುಟುಂಬದ ಎಲ್ಲರಿಗೂ ಇದು ಉತ್ತಮ ಸಂದೇಶ ನೀಡಲಿದೆ” ಎಂದು ನಿರ್ದೇಶಕ ಕೆ.ಪ್ರಕಾಶ ಅಂಬಳೆ ಹೇಳುತ್ತಾರೆ.

ಚಿತ್ರದಲ್ಲಿ ನಾಯಕನಾಗಿ ಅಭಿದಾಸ್ ಹಾಗೂ ನಿತಿಲ್ ಅಭಿನಯಿಸಿದ್ದು, ನಾಯಕಿಯರಾಗಿ ಖುಷಿ ಮತ್ತು ಮೇಘ ಕಾಣಿಸಿ ಕೊಂಡಿದ್ದಾರೆ.

ಚಿತ್ರರಂಗದ ಹಿರಿಯ ಕಲಾವಿದರಾದ ಶೋಭರಾಜ್, ಭವ್ಯ, ರಮೇಶ್ ಭಟ್, ಪ್ರಶಾಂತ್ ರವಿ, ಮಂಡ್ಯ ಸೀತಾರಾಮ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದು, ಕಾಮಿಡಿ ಕಲಾವಿದರು ಹಾಗೂ ಅನೇಕ ರಂಗಭೂಮಿ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ.

ತಾಂತ್ರಿಕ ವರ್ಗದಲ್ಲಿ ಛಾಯಾಗ್ರಹಣ-ಸದಾಶಿವ ಹಿರೇಮಠ-ರಾಜ್ ಕಡೂರ್, ಸಂಗೀತ ಎ.ಎಂ.ನೀಲ್, ಸಂಕಲನ ವೆಂಕಿ ಯುಡಿವಿ, ಸಾಹಸ ಮಾಸ್‌ ಮಾದ, ಸಾಹಿತ್ಯ ನಮ್ ಋಷಿ, ಸ್ಯಾಂಕಿ, ಸಿದ್ದುಶಿವರಾಮ್, ಪ್ರಸಾಧನ ವಿಜಯ್, ಪಿ.ಆರ್.ಓ- ಹರೀಶ್ ಅರಸು, ಡಾ, ಪ್ರಭು ಗಂಜಿಹಾಳ, ಡಾ, ವೀರೇಶ್ ಹಂಡಿಗಿ, ಪ್ರಚಾರ ವಿನ್ಯಾಸ ಆರ್.ಕ್ರಿಯೇಟಿವ್, ನಿರ್ದೇಶನ ತಂಡ ಗಣೇಶ್,ರವಿ, ಸಾಗರ್ ಇದ್ದು.

ಕಥೆ-ಚಿತ್ರ ಕಥೆ-ಸಂಭಾಷಣೆ ಜೊತೆಗೆ ನಿರ್ದೇಶನವನ್ನು ಕೆ. ಪ್ರಕಾಶ್ ಅಂಬಳೆ ಮಾಡಿದ್ದಾರೆ. ಲಯನ್ ಚಿಕ್ಕೇಗೌಡ, ಟಿ.ಸಿ ತಳಗವಾಡಿ ನಿರ್ಮಾಪಕರಾಗಿದ್ದಾರೆ.

ಇದೆ ಜೂ.೧೯ ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆ ಯಾಗಲಿದ್ದು ಪ್ರೇಕ್ಷಕರು ಚಿತ್ರಮಂದಿರಗಳಲ್ಲಿ ನೋಡಿ ಪ್ರೋತ್ಸಾಹಿಸ ಬೇಕೆಂದು ನಿರ್ಮಾಪಕರು ಕೋರಿದ್ದಾರೆ.

ರಾಜ್ಯ ಮಟ್ಟದ ವಿಶೇಷ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಡಾ, ಪ್ರಭು ಗಂಜಿಹಾಳ ಗದಗ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button