ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು – ಜೂನ್ 30 ಕೊನೆಯ ದಿನ.
ಚಳ್ಳಕೆರೆ ಜೂ.24

ನಗರದ ಹೊರ ವಲಯದ ನರಹರಿ ನಗರದ ಶ್ರೀನರಹರಿ ಸೇವಾ ಪ್ರತಿಷ್ಠಾನದಿಂದ ಪರಮ ಪೂಜ್ಯ ಬ್ರಹ್ಮಶ್ರೀ ಸಿಂಹಾದ್ರಿ ಸದ್ಗುರುಗಳ 106 ನೇ. ಜನ್ಮದಿನೋತ್ಸವದ ಪ್ರಯುಕ್ತ 2025-2026 ನೇ. ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಚಳ್ಳಕೆರೆ ನಗರ ಹಾಗೂ ನಗರಂಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು.

ಈ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಇದೇ ಜೂನ್ 30 ಕೊನೆಯ ದಿನವಾಗಿರುತ್ತದೆ ಹಾಗೂ ಹೆಚ್ಚಿನ ಮಾಹಿತಿಗಾಗಿ -97413 22399, 8296650015 ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸುವಂತೆ ಶ್ರೀನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ಪೂಜ್ಯ ಡಾ, ವೈ ರಾಜಾರಾಮ್ ಗುರುಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

