🚨BREAKING NEWS ಬ್ರೇಕಿಂಗ್ ನ್ಯೂಸ್,🚨ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಶ್ರೀ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವರಿಗೆ, ಜನ್ಮ ದಿನದ ಸಂಭ್ರಮ – ಅಭಿಮಾನಿಗಳು, ಕಾರ್ಯಕರ್ತರಿಂದ ಶುಭಾಶಯಗಳ ಮಹಾಪೂರ..!
ಉಡುಪಿ ಜು.17

ಜಿಲ್ಲಾ ಕಾಂಗ್ರೆಸ್ನ ಕ್ರಿಯಾಶೀಲ ನಾಯಕ ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ಜನಪರ ಸೇವೆ ಸಲ್ಲಿಸುತ್ತಿರುವ ಶ್ರೀ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವರು ಇಂದು ಜನ್ಮ ದಿನದ ಸಂಭ್ರಮದಲ್ಲಿದ್ದಾರೆ.
ಸಜ್ಜನ ರಾಜಕಾರಣಿ:-
ಮೃದು ಸ್ವಭಾವ ಹಾಗೂ ಸಮಾಜ ಮುಖಿ ಚಿಂತನೆಯ ಮೂಲಕ ಉಡುಪಿ ಜಿಲ್ಲೆಯ ರಾಜಕೀಯ ವಲಯದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಕಿಶನ್ ಹೆಗ್ಡೆ ಅವರು, ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ಜನಪರ ಹೋರಾಟಗಾರ:-
ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿರುವ ಇವರು, ಕಾರ್ಯಕರ್ತರ ಪಾಲಿನ ನೆಚ್ಚಿನ ನಾಯಕರಾಗಿ ಹೊರ ಹೊಮ್ಮಿದ್ದಾರೆ.
ಶುಭಾಶಯಗಳ ಮಹಾಪೂರ:-
ಈ ವಿಶೇಷ ದಿನದಂದು, ನಾಡಿನಾದ್ಯಂತ ಇರುವ ಅವರ ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಾಮಾಜಿಕ ಜಾಲ ತಾಣಗಳಲ್ಲಿ ಶುಭಾಶಯಗಳನ್ನು ಸುರಿಮಳೆಯನ್ನೇ ಹರಿಸುತ್ತಿದ್ದಾರೆ.
“ತಮಗೆ ದೇವರು ಆಯುರಾರೋಗ್ಯ, ಸುಖ, ಶಾಂತಿ ಮತ್ತು ಯಶಸ್ಸನ್ನು ಕರುಣಿಸಲಿ” ಎಂದು ಹಿತೈಷಿಗಳು ಪ್ರಾರ್ಥಿಸಿದ್ದಾರೆ.
ವರದಿ:ಆರತಿ.ಗಿಳಿಯಾರು.ಉಡುಪಿ

