ವೇದಗಳನ್ನು ವ್ಯವಸ್ಥಿತವಾಗಿ ವಿಂಗಡಿಸಿದ ಸನಾತನ ಧರ್ಮದ ಪ್ರಸಾರಕ ಮಹರ್ಷಿ ವೇದ ವ್ಯಾಸರು – ಎಚ್ ಲಕ್ಷ್ಮೀದೇವಮ್ಮ.

ಚಳ್ಳಕೆರೆ ಆ.03

ಗುರು ಪೂರ್ಣಿಮೆಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ ಅವರಿಗೆ ಸತ್ಸಂಗ ಕೇಂದ್ರದ ಸದಸ್ಯರಾದ ಶ್ರೀಮತಿ ಜಯಮ್ಮ ನರಸಿಂಹಮೂರ್ತಿ ಅವರಿಂದ ಸಿಹಿ ವಿತರಣೆ…..💐

ವೇದಗಳನ್ನು ನಾಲ್ಕು ಭಾಗಗಳಾಗಿ ವ್ಯವಸ್ಥಿತವಾಗಿ ವಿಂಗಡಿಸಿದ ಮಹರ್ಷಿ ವೇದ ವ್ಯಾಸರು ಭಾರತೀಯ ಸನಾತನ ಧರ್ಮವನ್ನು ಪ್ರಸಾರ ಮಾಡಿ ಸಂರಕ್ಷಿಸಿದ ಮಹಾನ್ ಸಂತ ಮಹಾತ್ಮರು ಎಂದು ಚಳ್ಳಕೆರೆಯ ತ್ಯಾಗರಾಜ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ ತಿಳಿಸಿದರು.

ತ್ಯಾಗರಾಜ ನಗರದ ಸದ್ಭಕ್ತರಾದ ಶ್ರೀಮತಿ ತಿಪ್ಪಮ್ಮ ಉಮಾಶಂಕರ್ ಅವರ ಸೂಜಿ ಮಲ್ಲೇಶ್ವರ ನಿವಾಸದಲ್ಲಿ “ಗುರು ಪೂರ್ಣಿಮೆ” ಯ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು “ಗುರು ಪೂರ್ಣಿಮೆ” ಯ ವಿಶೇಷತೆಗಳ ಬಗ್ಗೆ ಉಪನ್ಯಾಸ ನೀಡಿದರು.

ಆಷಾಡ ಪೂರ್ಣಿಮೆಯನ್ನು ವ್ಯಾಸ ಪೂರ್ಣಿಮೆಯಾಗಿ ಆಚರಿಸಲಾಗುತ್ತದೆ.ವ್ಯಾಸರು ಪರಾಶರ ಮುನಿ ಮತ್ತು ಸತ್ಯವತಿಯರ ಮಗನಾಗಿ ಜನಿಸುತ್ತಾರೆ‌‌. ಭಗವಾನ್ ವ್ಯಾಸರ ಮಗ ಶುಕ ಮಹಾಮುನಿ. ಜಗತ್ತಿನ ಸಮಸ್ತ ಜ್ಞಾನವು ವ್ಯಾಸರಿಂದ ಸೃಷ್ಟಿಯಾಗಿದೆ‌. ಹದಿನೆಂಟು ಪುರಾಣಗಳನ್ನು, ಒಂದು ಲಕ್ಷ ಶ್ಲೋಕಗಳನ್ನು ಒಳಗೊಂಡ ಮಹಾ ಭಾರತವನ್ನು ಬರೆದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದು ಮಹರ್ಷಿ ವೇದ ವ್ಯಾಸರ ಮಹಿಮೆಯನ್ನು ವರ್ಣಿಸಿದರು.

ಜಗದಿ ಸಂತೆಯೊಳ್ ಅಲೆಯುವ ಮನುಜ:-ಯಶೋಧಾ ದೇವರಾಜ್ ಮತ್ತು ಗೀತಾ ಸುಂದರೇಶ್ ದೀಕ್ಷಿತ್ ಅವರಿಂದ…..

ಗುರು ಪೂರ್ಣಿಮೆಯ ಪ್ರಯುಕ್ತ ಸತ್ಸಂಗ ಕೇಂದ್ರದ ಸದ್ಭಕ್ತರಿಂದ ಸಾಮೂಹಿಕ ಶ್ರೀರಾಮರಕ್ಷಾ ಸ್ತೋತ್ರ ಪಠಣ, ಶ್ರೀರಾಮಕೃಷ್ಣರ ನಾಮಸ್ಮರಣೆ, ಗೀತಾ ನಾಗರಾಜ್, ಗೀತಾ ಪ್ರಕಾಶ್, ತಿಪ್ಪಮ್ಮ, ಮೋಹಿನಿ, ಪ್ರಮೀಳಾ ಜಗದೀಶ್, ಯಶೋಧಾ ದೇವರಾಜ್, ಗೀತಾ ಸುಂದರೇಶ್ ಅವರಿಂದ ವಿಶೇಷ ಭಜನೆ ನಡೆದರೆ ಯತೀಶ್ ಎಂ ಸಿದ್ದಾಪುರ ಅವರಿಂದ “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ, ಆರತಿ, ಪ್ರಸಾದ ವಿನಿಯೋಗ ನಡೆಯಿತು.

ವಿಶೇಷ ಸತ್ಸಂಗದಲ್ಲಿ ಸುಧಾಮಣಿ, ಪುಷ್ಪಲತಾ ವಿಜಯ್, ಜಯಮ್ಮ, ವಿಜಯಲಕ್ಷ್ಮೀ, ಪ್ರೇಮಾ, ಸುವರ್ಣ ನಾಗರಾಜ್, ಸರಸ್ವತಿ ಸೇರಿದಂತೆ ಸದ್ಭಕ್ತರು ಭಾಗವಹಿಸಿದ್ದರು.

ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button