ಬ್ರೇಕಿಂಗ್ ನ್ಯೂಸ್🚨⚡💥ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಉಡುಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಹರೀಶ್ ಕುಂಭಾಸಿ ನೇಮಕ – ಅಭಿನಂದನೆಗಳ ಮಹಾಪೂರ..!💥

ಉಡುಪಿ ಸೆ.14

ನೇಮಕಾತಿ ವಿವರ:-

‘ಕರಾವಳಿ ಚಾಣಕ್ಯ’ ಪತ್ರಿಕೆಯ ಸಂಪಾದಕರಾದ ಹರೀಶ್ ಕುಂಭಾಸಿ ಅವರನ್ನು ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ’ ಸಂಘಟನೆಯ ಉಡುಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಅಧಿಕೃತ ಆದೇಶ:-

ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ (ನೋಂದಣಿ) ಸಂಖ್ಯೆ:-

DRB4/SOR/52/2022-2023) ಈ ಸಂಘಟನೆಯ ರಾಜ್ಯಧ್ಯಕ್ಷರಾದ ಬಿ. ಮಲ್ಲಿಕಾರ್ಜುನ ಅವರು 14/09/2026 ರಂದು ಈ ನೇಮಕಾತಿ ಆದೇಶ ಪತ್ರವನ್ನು ಹೊರಡಿಸಿದ್ದಾರೆ.

ಜವಾಬ್ದಾರಿ ಹಾಗೂ ಕರ್ತವ್ಯ:-

ಉಡುಪಿ ಜಿಲ್ಲೆಯ ಪತ್ರಕರ್ತರನ್ನು ಒಗ್ಗೂಡಿಸಿ ಸಂಘಟಿಸುವುದು ಹಾಗೂ ಅವರ ಮೂಲಭೂತ ಹಕ್ಕುಗಳ ರಕ್ಷಣೆ ಮತ್ತು ವೃತ್ತಿಪರ ಸಮಸ್ಯೆಗಳಿಗೆ ಧನಿಯಾಗುವಂತೆ ನೂತನ ಕಾರ್ಯದರ್ಶಿಗೆ ಸೂಚಿಸಲಾಗಿದೆ.

ಅಭಿನಂದನೆಗಳು:-

ಹರೀಶ್ ಕುಂಭಾಸಿ ಅವರು ನೂತನ ಜವಾಬ್ದಾರಿಯನ್ನು ವಹಿಸಿ ಕೊಳ್ಳುತ್ತಿದ್ದಂತೆ, ವಿವಿಧ ಪತ್ರಿಕೆಗಳ ಸಂಪಾದಕರು, ಹಿರಿಯ ಪತ್ರಕರ್ತರು ಹಾಗೂ ಸಂಘಟನೆಯ ಪ್ರಮುಖರು ಹರ್ಷ ವ್ಯಕ್ತಪಡಿಸಿ ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ವರದಿ:ಆರತಿ.ಗಿಳಿಯಾರು.ಉಡುಪಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button