ವಿಜಯರಾಘವೆಂದ್ರ ಅಭಿನಯದ “ರುದ್ರಾಭಿಷೇಕಂ’ ಚಿತ್ರದ – ಟ್ರೈಲರ್ ಬಿಡುಗಡೆ.

ಬೆಂಗಳೂರ ಸೆ.18

ಫ್ಯಾನ್ ಇಂಡಿಯಾ ಕ್ರಿಯೇಷನ್ಸ್ ವಿಜಯಪುರ ಅವರ ಇದೆ ಸೆಪ್ಟಂಬರ್ ೨೫ ರಂದು ರಾಜ್ಯಾದ್ಯಂತ ತೆರೆಗೆ ಬರಲಿರುವ ‘ರುದ್ರಾಭಿಷೇಕಂ’ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಜಿಟಿ ಮಾಲ್‌ನಲ್ಲಿ ನೆರವೇರಿತು.

ನಾಡಿನ ಕಲೆ, ಸಾಂಸ್ಕೃತಿಕ ಪರಂಪರೆಗಳಲ್ಲಿ ಒಂದಾದ ವೀರಗಾಸೆ ಕಲೆ ಆರಾಧಿಸುವ ಕುಟುಂಬ ಕುರಿತು ಮತ್ತು ವೀರಭದ್ರ ದೇವರ ಇತಿಹಾಸ ಹೇಳುವ ‘ರುದ್ರಾಭಿಷೇಕಂ’ ದಲ್ಲಿ ವೀರಗಾಸೆಯ ಕುಣಿತ ಗಮನ ಸೆಳೆಯಲಿದೆ.

ವೀರಗಾಸೆಯ ವಿಶೇಷ ಲುಕ್ ನಲ್ಲಿ ಕಾಣಿಸಿ ಕೊಂಡ ವಿಜಯರಾಘವೇಂದ್ರ ಮಾತನಾಡಿ ಇದೊಂದು ದೈವ ಕಲ್ಪನೆಯ ಸಾಮಾಜಿಕ ಚಿತ್ರ ಇಲ್ಲಿ ತಂದೆ ಮತ್ತು ಮಗನ ಪಾತ್ರಗಳಲ್ಲಿ ಕಾಣಿಸಿ ಕೊಂಡಿದ್ದೇನೆ.

ವಿಶೇಷ ಪಾತ್ರ ಅನಿಸಿದ್ರಿಂದ ನಾನು ಈ ಸಿನಿಮಾಕ್ಕೆ ಒಪ್ಪಿಕೊಂಡೆ ಎಂದರು. ಸಂಗೀತ ನಿರ್ದೇಶಕ ವಿ ಮನೋಹರ್ ಮಾತನಾಡಿ ನಾನು ಸಂಗೀತ ನೀಡುವುದ ರೊಂದಿಗೆ ಇದರಲ್ಲಿ ಒಂದು ಪಾತ್ರ ಮಾಡಿರುವೆ.

ಈ ಪಾತ್ರದಲ್ಲಿನ ನಾನು ಡಿಫರೆಂಟ್ ಆಗಿ ಕಾಣುತ್ತಿದ್ದೇನೆ. ಮೇಕಪ್ ಆದಮೇಲೆ ನಾನು ಹೀಗೆ ಕಾಣುತ್ತಿದ್ದೇನೆ ಎಂದು ಸಂಶಯ ಬಂದಿದ್ದು ಆತರದ ಲುಕ್ ನಲ್ಲಿ ನನ್ನನ್ನು ಚಿತ್ರಿಸಿದ್ದಾರೆ ಎಂದರು.

ಥ್ರಿಲ್ಲರ್ ಮಂಜು ಮಾತನಾಡಿ ವಿಜಯರಾಘವೇಂದ್ರ ಅವರಿಗಾಗಿಯೇ ಹೊಡೆದಾಟದ ಪಟ್ಟುಗಳನ್ನು ಡಿಫ್ರೆಂಟ್ ಆಗಿ ಮಾಡಿದ್ದೇನೆ ಎಂದರು.

ನಿರ್ದೇಶಕ ವಸಂತ್ ಕುಮಾರ್ ಮಾತನಾಡಿ ಚಿತ್ರೀಕರಣ ಸಂದರ್ಭದಲ್ಲಿ ಹಲವು ಅಡೆತಡೆಗಳು ಎದುರಾದರು ಅವುಗಳನ್ನು ಮೆಟ್ಟಿನಿಂತು ಪೂರ್ಣಪ್ರಮಾಣದ ಚಿತ್ರವನ್ನು ತಂದ ಬಗೆಯನ್ನು ಹೇಳಿದರು. ಈಗಾಗಲೇ ಈ ಸಿನಿಮಾದ ಹಾಡುಗಳು ಸೂಪರ್ ಹಿಟ್ ಆಗಿವೆ ಎಂದರು.

ಚಿತ್ರದಲ್ಲಿ ವಿಜಯರಾಘವೇಂದ್ರ, ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ, ಬಲರಾಜ್‌ವಾಡಿ, ಶಂಕರ ನಾರಾಯಣ್, ಮೈಸೂರು ಬಸವರಾಜ್, ಬ್ಯಾಂಕ್ ಪ್ರಸಾದ, ಮನು, ಬುಲೆಟ್ ವಿನು, ವಿನಯ್, ಸನತ್, ಸಂದೀಪ್, ಮಹಾಲಿಂಗ್ ಹೂಗಾರ್, ಸೌಂದರ್ಯ, ನವನೀತ, ಮಮತಾ, ಮಂಜುಳಾ, ಧನಲಕ್ಷ್ಮಿ, ಸ್ವಾತಿ, ಮೊದಲಾದವರಿದ್ದಾರೆ.

ತಾಂತ್ರಿಕ ವರ್ಗದಲ್ಲಿ ಛಾಯಾಗ್ರಹಣ ಮುತ್ತುರಾಜ್, ವಿ.ಮನೋಹರ್ ಸಂಗೀತ , ಭಜರಂಗಿ ಮೋಹನ್ ನೃತ್ಯ ಸಂಯೋಜನೆ, ಥ್ರಿಲ್ಲರ್‌ಮಂಜು ಸಾಹಸ, ಬಾಬುಖಾನ್ ಕಲಾ ನಿರ್ದೇಶನ, ನೊಣವಿನಕೆರೆ ಕುಮಾರ ಪ್ರಸಾಧನ, ಪಶುಪತಿ ವಸ್ತ್ರಾಲಂಕಾರ, ಮುತ್ತುರಾಜ್.ಟಿ ಸಂಕಲನ, ನಾಗೇಂದ್ರ, ಡಾ, ಪ್ರಭು.ಗಂಜಿಹಾಳ, ಡಾ, ವೀರೇಶ್ ಹಂಡಿಗಿ ಪಿ.ಆರ್.ಓ ಸಹ ನಿರ್ದೇಶನ ಮನು ಮತ್ತು ಧೀರಜ್, ಚಿತ್ರಕಥೆ-ಸಾಹಿತ್ಯ ನಿರ್ದೇಶನ ಕೆ ವಸಂತ್‌ಕುಮಾರ್ ಅವರದಿದೆ.

ಎನ್.ಜಯರಾಮ್, ಕೆ.ಎನ್.ಮಂಜುನಾಥ್, ಕೆ. ವೆಂಕಟೇಶ್, ಬಿ.ಚಿದಾನಂದ ಮೂರ್ತಿ, ಸುರೇಶ ಬಾಬು, ಕೆ.ಎಸ್.ರವಿ, ಬಿ.ಕೆ.ಅಶ್ವತ್ ನಾರಾಯಣ, ಡಾ, ಎಂ.ಶಿವಕುಮಾರ, ಕುಸುಮಾ ವಸಂತಕುಮಾರ ಒಂಬತ್ತು ಜನ ನಿರ್ಮಾಪಕರಿದ್ದಾರೆ.

ರಾಜ್ಯ ಮಟ್ಟದ ವಿಶೇಷ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಡಾ, ಪ್ರಭು ಗಂಜಿಹಾಳ ಗದಗ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button