ಶಿಸ್ತು, ತಾಳ್ಮೆ ಮೈಗೂಡಿಸಿ ಕೊಳ್ಳಲು ಯೋಗ ಸಹಕಾರಿ – ಡಾ. ಎ. ಕರಿಬಸಪ್ಪ.
ಕೆಂಚಮಲ್ಲನಹಳ್ಳಿ ಜೂನ್.21
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಗಡಿಗ್ರಾಮ ಕೆಂಚಮಲ್ಲನಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಯೋಗ ಶಿಬಿರ ಆಯೋಜಿಸಲಾಗಿತ್ತು. ಡಾ. ಎ. ಕರಿಬಸಪ್ಪ ಮಾತನಾಡಿ ಪ್ರತಿದಿನ ಯೋಗ ಮಾಡುವುದನ್ನು ಅಭ್ಯಾಸ ಮಾಡಿದಲ್ಲಿ ಜ್ಞಾನವನ್ನು ವೃದ್ಧಿಸಿ ಕೊಳ್ಳುವ ಜೊತೆಗೆ ಶಿಸ್ತು ಸಂಯಮ ಹಾಗೂ ತಾಳ್ಮೆಯನ್ನು ಮೈಗೂಡಿಸಿ ಕೊಂಡು ದೇಹದ ಅಂಗಾಂಗಗಳನ್ನು ಸುಸ್ಥಿತಿಯಲ್ಲಿಟ್ಟು ಕೊಳ್ಳಬಹುದು ಎಂದು ತಿಳಿಸಿದರು.ಪ್ರತಿಯೊಬ್ಬರು ನಿತ್ಯ ಕನಿಷ್ಠ ಒಂದು ಗಂಟೆ ಯೋಗಾಭ್ಯಾಸ ಮಾಡುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಆರೋಗ್ಯವಂತ ಜೀವನ ನಡೆಸಬಹುದು.
ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುವ ಯೋಗಾಭ್ಯಾಸವನ್ನು ಕೇವಲ ಒಂದು ದಿನಕ್ಕೆ ಸೀಮಿತ ಗೊಳಿಸದೆ ಪ್ರತಿನಿತ್ಯ ಕನಿಷ್ಠ ಒಂದು ಗಂಟೆ ಅಭ್ಯಾಸ ಮಾಡುವುದನ್ನು ರೂಢಿ ಮಾಡಿ ಕೊಳ್ಳಬೇಕು ಎಂದು ಸಲಹೆ ನೀಡಿದರು.ಯೋಗ ದಿನಾಚರಣೆ ಯಲ್ಲಿ ಶಾಲೆಯ ಶಿಕ್ಷಕರಾದ ತಿಪ್ಪೇಸ್ವಾಮಿ , ಚೆನ್ನಬಸವಣ್ಣ , ಹರ್ಷ ವರ್ಧನ ,ರವಿಕುಮಾರ , ಡಾ.ಎ.ಕರಿಬಸಪ್ಪ ,ರಂಗನಾಯ್ಕ, ಹನುಮಂತ ಕುಮಾರ್,.ಗ್ರಾಮದ ಯುವ ಮುಖಂಡರಾದ ಕೆ. ಜಿ. ಬಸವರಾಜ, ಸೇರಿ ಅನೇಕರು ಯೋಗ ದಿನಾಚರಣೆಯ ಉಪಸ್ಥಿತರಿದ್ದರು.
ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್. ಕಾನಾ ಹೊಸಹಳ್ಳಿ.