ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ದುಷ್ಕರ್ಮಿಗಳು ಪರಾರಿ.
ವಿಜಯಪುರ ಜು.14





ಯುವಕನ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಾಕಸ್ತ್ರಗಳಿಂದ ದಾಳಿಗೈದು ಪರಾರಿ ಯಾಗಿರುವ ಘಟನೆ ವಿಜಯಪುರ ನಗರದ ಅಮರ ವರ್ಷಿಣಿ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದೆ. ಸುಶೀಲ್ ಕಾಳೆ ಮೇಲೆ ದಾಳಿ ಮಾಡಲಾಗಿದೆ. ತೀವ್ರವಾಗಿ ಗಾಯ ಗೊಂಡಿರುವ ಕಾಳೆಯನ್ನು ನಗರದ ಬಿಎಲ್ಡಿಇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಗಾಂಧಿ ಚೌಕ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು. ಇನ್ನೂ ದಾಳಿ ಮಾಡಿ ದುಷ್ಕರ್ಮಿಗಳು ಪರಾರಿ ಯಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.