ಹಿರಿಯ ನಾಗರಿಕರು, ವಿಶೇಷ ಚೇತನರಿಂದ ಮತದಾನ ಜಾಗೃತಿ.
ಹುನಗುಂದ ಏಪ್ರಿಲ್.19

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಾ ಪಂಚಾಯತಿ ಆವರಣದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರ ಮತದಾನ ಜಾಗೃತಿ ಜಾಥಾಗೆ ಮಾನ್ಯ ಕಾರ್ಯ ನಿರ್ವಾಹಕ ಅಧಿಕಾರಿ ತಾರಾ ಎನ್ ಹಾಗೂ ಇಳಕಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಮುರಳಿಧರ ದೇಶಪಾಂಡೆ ಅವರು ಚಾಲನೆ ನೀಡಿದರು.ಈ ಜಾಥಾವೂ ತಾಲೂಕಾ ಪಂಚಾಯತಿ ಕಚೇರಿಯಿಂದ ನಗರದ ಸರ್ಕಲ್ ವರೆಗೂ ನಡೆಯಿತು. ಬಳಿಕ ಇಳಕಲ್ಲ ಹಾಗೂ ಹುನಗುಂದ ತಾಲೂಕಿನ ಕಾರ್ಯ ನಿರ್ವಾಹಕ ಅಧಿಕಾರಿ ತಾರಾ ಎನ್ ಹಾಗೂ ಮುರಳಿಧರ ದೇಶಪಾಂಡೆ ಅವರು ಮತದಾನ ಜಾಗೃತಿ ಅರಿವು ಮೂಡಿಸಿದರು. ಬಳಿಕ ಮಾನವ ಸರಪಳಿ ಮೂಲಕ ಮತದಾನ ಅರಿವು ಮೂಡಿಸಲಾಯಿತು. ಕಾರ್ಯ ನಿರ್ವಾಹಕ ಅಧಿಕಾರಿ ತಾರಾ ಎನ್ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಮಾನ್ಯ ಸಹಾಯಕ ನಿರ್ದೆಶಕ ಮಹಾಂತೇಶ್ ಕೋಟಿ , ಐಇಸಿ ಸಂಯೋಜಕ ಬಸವರಾಜ ಕೊಪ್ಪದ, ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕ ಕೃಷ್ಣಾಜಿ ಪವಾರ್ , MRW, VRW ಅವರು ಉಪಸ್ಥಿತರಿದ್ದರು.