ಸರ್ಕಾರದ ಯೋಜನೆಗಳು ಜನರಿಗೆ ತಲುಪಿಸಬೇಕು – ಎನ್.ಜಿ ರಮೇಶ್.
ತರೀಕೆರೆ ನ.29

ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದ್ದು ಈ ಯೋಜನೆಗಳು ಜನರಿಗೆ ತಲುಪಬೇಕು ಎಂದು ತಾಲೂಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತಣಿಗೆಬೈಲ್ ರಮೇಶ್ ಗೋವಿಂದೇಗೌಡ ರವರು ಹೇಳಿದರು. ಅವರು ಇಂದು ಪಟ್ಟಣದ ತಾಲೂಕ ಪಂಚಾಯಿತಿ ಸಭಾಂಗಣದಲ್ಲಿ ಕರೆಯಲಾಗಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಆಹಾರ ಮತ್ತು ಪಡಿತರ ಶಿರಸ್ತೆದಾರರಾದ ಜಗದೀಶ್ ಮಾತನಾಡಿ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ ಹಾಗೂ ತಿದ್ದುಪಡಿ ಸೇರ್ಪಡೆ ಬದಲಾವಣೆಗೂ ಸಹ ಸರ್ಕಾರ ಅವಕಾಶ ಕೊಟ್ಟಿಲ್ಲ, ಮುಂದೆ ಅವಕಾಶ ಕೊಟ್ಟಾಗ ಗ್ರಾಮ ಒನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಹೇಳಿದರು. ಸಮಿತಿ ಸದಸ್ಯರಾದ ಎಚ್ ಎಸ್ ಮೆಹಬೂಬ್ ರವರು ಗ್ರಾಮಾಂತರ ಹಳ್ಳಿಗಳಿಗೆ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲ ನಂದಿ, ಸುಣ್ಣದಹಳ್ಳಿ ಗ್ರಾಮಗಳ ಹೆಣ್ಣು ಮಕ್ಕಳು ಮಹಿಳೆಯರು ಹಾಗೂ ಶಾಲಾ ಮಕ್ಕಳು ಪ್ರತಿ ದಿನ ಬಸ್ ಸಂಪರ್ಕವಿಲ್ಲದೆ ಪರದಾಡುತ್ತಿದ್ದಾರೆ. ತರೀಕೆರೆ ತಾಲೂಕಿನಲ್ಲಿ ಡಿಪೋ ನಿರ್ಮಾಣ ಮಾಡಿ ಸಾರಿಗೆ ವ್ಯವಸ್ಥೆ ಮಾಡಿರಿ ಎಂದು ಕೇಳಿದ ಪ್ರಶ್ನೆಗೆ ಶಕ್ತಿ ಯೋಜನೆ ಕುರಿತು ಸಾರಿಗೆ ಅಧಿಕಾರಿಗಳು ಶಾಸಕರು ಪ್ರಯತ್ನ ಮಾಡಿದರೆ ಡಿಪೋ ಮಂಜೂರಾತಿ ಮಾಡಿಸಬೇಕು ಎಂದು ಹೇಳಿದರು. ಗೃಹಜೋತಿ ಕುರಿತು ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಮಂಜುನಾಥ್ ಸಭೆಗೆ ಪ್ರಗತಿ ಕುರಿತು ತಿಳಿಸಿದರು. ಯುವನಿಧಿ ಕುರಿತು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ. ದೇವೇಂದ್ರಪ್ಪ ವಿವರಿಸಿದರು. ಸದಸ್ಯರಾದ ರತ್ನಮ್ಮ ಜಯಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎನ್. ವೆಂಕಟೇಶ್.ತರೀಕೆರೆ.ಚಿಕ್ಕಮಗಳೂರು